ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಈ ಪ್ರಕರಣದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ಅಥವಾ ಪ್ರಕರಣವನ್ನು ತನಿಖಾ ಸಂಸ್ಥೆಗೆ ವಹಿಸುವ ಅವಶ್ಯಕತೆ ಕಂಡು ಬರುತ್ತಿಲ್ಲ. ಒಂದೊಮ್ಮೆ ನಿರ್ದಿಷ್ಟವಾಗಿ ಯಾವುದಾದರೂ ಪ್ರಕರಣದಲ್ಲಿ ಅವ್ಯವಹಾರ ಅಥವಾ ಹಣದ ದುರ್ಬಳಕೆ ಬಗ್ಗೆ ಅರ್ಜಿದಾರರಿಗೆ ಅನುಮಾನವಿದ್ದರೆ, ಲೋಕಾಯುಕ್ತ ಅಥವಾ ಕೇಂದ್ರ ವಿಚಕ್ಷಣಾ ಆಯುಕ್ತರಿಗೆ ಮನವಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬಹುದು’ ಎಂದು ಸೂಚಿಸಿ ಅರ್ಜಿ ವಜಾಗೊಳಿಸಿತು.