<p><strong>ಬೆಂಗಳೂರು: </strong>‘ಔಷಧಿ ಪರಿಣಾಮದಿಂದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ವಿಫಲವಾಗಿರುವ ಸಾಧ್ಯತೆಯಿದ್ದು, 23ರಲ್ಲಿ 8 ಮಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಉಳಿದವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ’ ಎಂದು ಮಿಂಟೊ ಕಣ್ಣಿನ ಆಸ್ಪತ್ರೆ ನಿರ್ದೇಶಕಿ ಡಾ. ಸುಜಾತಾ ರಾಥೋಡ್ ತಿಳಿಸಿದರು.</p>.<p>‘ಕಳೆದ ಮಂಗಳವಾರ ನಡೆಸಿದ ಶಸ್ತ್ರಚಿಕಿತ್ಸೆಯಲ್ಲಿ ವ್ಯತಿರಿಕ್ತ ಫಲಿತಾಂಶ ಕಾಣಿಸಿಕೊಂಡಿದೆ. ಇದೇ ಮೊದಲ ಬಾರಿಗೆ ಶಸ್ತ್ರಚಿಕಿತ್ಸೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ವಿಫಲವಾಗಿದೆ. ಈ ಹಿಂದಿನಿಂದ ಅನುಸರಿಸಿಕೊಂಡು ಬಂದಶಸ್ತ್ರಚಿಕಿತ್ಸೆ ವಿಧಾನವನ್ನೇ ಈ ಪ್ರಕರಣಗಳಲ್ಲಿ ಕೂಡ ಅನುಸರಿಸಲಾಗಿದೆ’ ಎಂದು ಸ್ಪಷ್ಟಪಡಿಸಿದರು.</p>.<p>‘ನಮ್ಮ ಆಸ್ಪತ್ರೆಯಲ್ಲಿ 10 ಸಾವಿರ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಕೆಲವು ಪ್ರಕರಣದಲ್ಲಿ ರೋಗಿಗಳು ಔಷಧಕ್ಕೆ ಸ್ಪಂದಿಸುವುದಿಲ್ಲ. ಸದ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿರುವ 8 ಮಂದಿ ಕೂಡ ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಪ್ರತಿನಿತ್ಯಕಣ್ಣು ಮತ್ತು ಕೈಗೆ ಒಂದು ಇಂಜೆಕ್ಷನ್ ನೀಡಬೇಕಾಗುತ್ತದೆ. ಹಾಗಾಗಿ ಆಸ್ಪತ್ರೆಯಲ್ಲಿ ಉಳಿಸಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಶಸ್ತ್ರಚಿಕಿತ್ಸೆ ನೆರವೇರಿಸಿದ ಡಾ.ದಾಕ್ಷಾಯಿಣಿ ನೇತೃತ್ವದ ವೈದ್ಯರ ತಂಡವನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಔಷಧಿ ಪರಿಣಾಮದಿಂದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ವಿಫಲವಾಗಿರುವ ಸಾಧ್ಯತೆಯಿದ್ದು, 23ರಲ್ಲಿ 8 ಮಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಉಳಿದವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ’ ಎಂದು ಮಿಂಟೊ ಕಣ್ಣಿನ ಆಸ್ಪತ್ರೆ ನಿರ್ದೇಶಕಿ ಡಾ. ಸುಜಾತಾ ರಾಥೋಡ್ ತಿಳಿಸಿದರು.</p>.<p>‘ಕಳೆದ ಮಂಗಳವಾರ ನಡೆಸಿದ ಶಸ್ತ್ರಚಿಕಿತ್ಸೆಯಲ್ಲಿ ವ್ಯತಿರಿಕ್ತ ಫಲಿತಾಂಶ ಕಾಣಿಸಿಕೊಂಡಿದೆ. ಇದೇ ಮೊದಲ ಬಾರಿಗೆ ಶಸ್ತ್ರಚಿಕಿತ್ಸೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ವಿಫಲವಾಗಿದೆ. ಈ ಹಿಂದಿನಿಂದ ಅನುಸರಿಸಿಕೊಂಡು ಬಂದಶಸ್ತ್ರಚಿಕಿತ್ಸೆ ವಿಧಾನವನ್ನೇ ಈ ಪ್ರಕರಣಗಳಲ್ಲಿ ಕೂಡ ಅನುಸರಿಸಲಾಗಿದೆ’ ಎಂದು ಸ್ಪಷ್ಟಪಡಿಸಿದರು.</p>.<p>‘ನಮ್ಮ ಆಸ್ಪತ್ರೆಯಲ್ಲಿ 10 ಸಾವಿರ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಕೆಲವು ಪ್ರಕರಣದಲ್ಲಿ ರೋಗಿಗಳು ಔಷಧಕ್ಕೆ ಸ್ಪಂದಿಸುವುದಿಲ್ಲ. ಸದ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿರುವ 8 ಮಂದಿ ಕೂಡ ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಪ್ರತಿನಿತ್ಯಕಣ್ಣು ಮತ್ತು ಕೈಗೆ ಒಂದು ಇಂಜೆಕ್ಷನ್ ನೀಡಬೇಕಾಗುತ್ತದೆ. ಹಾಗಾಗಿ ಆಸ್ಪತ್ರೆಯಲ್ಲಿ ಉಳಿಸಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಶಸ್ತ್ರಚಿಕಿತ್ಸೆ ನೆರವೇರಿಸಿದ ಡಾ.ದಾಕ್ಷಾಯಿಣಿ ನೇತೃತ್ವದ ವೈದ್ಯರ ತಂಡವನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>