‘ಪ್ರಾಧಿಕಾರವು ಅಭಿವೃದ್ಧಿಪಡಿಸಿರುವ ಬಡಾವಣೆಗಳಲ್ಲಿ ನಾಗರಿಕ ಸೌಲಭ್ಯ ನಿವೇಶನಗಳನ್ನು ನಿರ್ದಿಷ್ಟ ಉದ್ದೇಶಕ್ಕಾಗಿ ಗುತ್ತಿಗೆ ಆಧಾರದ ಮೇಲೆ ಹಂಚಿಕೆ ಮಾಡಲಾಗಿದೆ. ಕೆಲವು ಕಿಡಿಗೇಡಿಗಳು ಪ್ರಾಧಿಕಾರದ ಪತ್ರಗಳು, ಅಧಿಕಾರಿಗಳ ಸಹಿ, ಮೊಹರುಗಳನ್ನು ನಕಲು ಮಾಡಿ, ನಾಗರಿಕ ಸೌಲಭ್ಯ ನಿವೇಶನಗಳನ್ನು ಗುತ್ತಿಗೆ ಪಡೆದಿರುವ ಸಂಘ-ಸಂಸ್ಥೆಗಳಿಗೆ ಬಿಡಿಎ ಹೆಸರಿನಲ್ಲಿ ಪತ್ರಗಳನ್ನು ಕಳುಹಿಸುತ್ತಿದ್ದಾರೆ. ಹಂಚಿಕೆ ಮಾಡಲಾದ ನಾಗರಿಕ ಸೌಲಭ್ಯ ನಿವೇಶನ ಅನ್ಯ ಉದ್ದೇಶಕ್ಕೆ ಬಳಕೆಯಾಗುತ್ತಿರುವುದರಿಂದ ಗುತ್ತಿಗೆ ರದ್ದುಪಡಿಸಲಾಗುತ್ತಿದೆ ಎಂದು ಭಯ ಹುಟ್ಟಿಸಿ ಹಣವನ್ನು ವಸೂಲಿ ಮಾಡಿರುವುದು ಪತ್ತೆಯಾಗಿದೆ.’