<p><strong>ಬೆಂಗಳೂರು</strong>: ಕೆಲವು ವಂಚಕರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಹೆಸರನ್ನು ದುರುಪಯೋಗಪಡಿಸಿಕೊಂಡು ನಾಗರಿಕ ಸೌಲಭ್ಯ ನಿವೇಶನಗಳು ಹಾಗೂ ಅಕ್ರಮ-ಸಕ್ರಮಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರನ್ನು ಮೋಸಗೊಳಿಸುತ್ತಿದ್ದಾರೆ. ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಬಿಡಿಎ ಆಯುಕ್ತ ಎಚ್.ಆರ್.ಮಹದೇವ್ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.</p>.<p>‘ಪ್ರಾಧಿಕಾರವು ಅಭಿವೃದ್ಧಿಪಡಿಸಿರುವ ಬಡಾವಣೆಗಳಲ್ಲಿ ನಾಗರಿಕ ಸೌಲಭ್ಯ ನಿವೇಶನಗಳನ್ನು ನಿರ್ದಿಷ್ಟ ಉದ್ದೇಶಕ್ಕಾಗಿ ಗುತ್ತಿಗೆ ಆಧಾರದ ಮೇಲೆ ಹಂಚಿಕೆ ಮಾಡಲಾಗಿದೆ. ಕೆಲವು ಕಿಡಿಗೇಡಿಗಳು ಪ್ರಾಧಿಕಾರದ ಪತ್ರಗಳು, ಅಧಿಕಾರಿಗಳ ಸಹಿ, ಮೊಹರುಗಳನ್ನು ನಕಲು ಮಾಡಿ, ನಾಗರಿಕ ಸೌಲಭ್ಯ ನಿವೇಶನಗಳನ್ನು ಗುತ್ತಿಗೆ ಪಡೆದಿರುವ ಸಂಘ-ಸಂಸ್ಥೆಗಳಿಗೆ ಬಿಡಿಎ ಹೆಸರಿನಲ್ಲಿ ಪತ್ರಗಳನ್ನು ಕಳುಹಿಸುತ್ತಿದ್ದಾರೆ. ಹಂಚಿಕೆ ಮಾಡಲಾದ ನಾಗರಿಕ ಸೌಲಭ್ಯ ನಿವೇಶನ ಅನ್ಯ ಉದ್ದೇಶಕ್ಕೆ ಬಳಕೆಯಾಗುತ್ತಿರುವುದರಿಂದ ಗುತ್ತಿಗೆ ರದ್ದುಪಡಿಸಲಾಗುತ್ತಿದೆ ಎಂದು ಭಯ ಹುಟ್ಟಿಸಿ ಹಣವನ್ನು ವಸೂಲಿ ಮಾಡಿರುವುದು ಪತ್ತೆಯಾಗಿದೆ.’</p>.<p>‘ಅಕ್ರಮ-ಸಕ್ರಮಕ್ಕೆ ಸಂಬಂಧಿಸಿದಂತೆ, ಕೆಲವು ಮನೆ ಮಾಲೀಕರಿಗೆ ಹಾಗೂ ಭೂ ಮಾಲೀಕರಿಗೂ ಇದೇ ಮಾದರಿಯಲ್ಲಿ ವಂಚನೆ ನಡೆಸಿರುವುದು ಬೆಳಕಿಗೆ ಬಂದಿದೆ. ಕೆಲವು ವಂಚಕರು ಅಕ್ರಮ-ಸಕ್ರಮ ವ್ಯಾಪ್ತಿಗೆ ಒಳಪಡುವ ನಿವೇಶನ ಅಥವಾ ಮನೆ ಸಂಖ್ಯೆ ನಮೂದಿಸಿ, ಪ್ರಾಧಿಕಾರದ ಆಯುಕ್ತರ ಆದೇಶದ ಮೇರೆಗೆ ಎಂಬ ಒಕ್ಕಣೆಯ ಪತ್ರ ಕಳುಹಿಸುತ್ತಿದ್ದಾರೆ. ಮೊಬೈಲ್ ಮೂಲಕವೂ ಮಾಲೀಕರನ್ನು ಸಂಪರ್ಕಿಸಿ ಅಕ್ರಮ ಕಟ್ಟಡವನ್ನು ಸಕ್ರಮಗೊಳಿಸುವುದಾಗಿ ಹೇಳಿ ಹಣ ವಸೂಲಿ ಮಾಡುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿದೆ.’</p>.<p>‘ಇಂತಹ ನಕಲಿ ಪತ್ರಗಳ ಬಗ್ಗೆ ಪ್ರಾಧಿಕಾರದ ಜಾಗೃತ ದಳವು ತನಿಖೆಯನ್ನು ಪ್ರಾರಂಭಿಸಿದೆ. ಸಾರ್ವಜನಿಕರು ಪ್ರಾಧಿಕಾರದ ಹೆಸರಿನಲ್ಲಿ ಇಂತಹ ಯಾವುದೇ ಪತ್ರಗಳನ್ನು ಸ್ವೀಕರಿಸಿದರೆ, ಬಿಡಿಎ ಕೇ೦ದ್ರ ಕಚೇರಿಯನ್ನು ಸಂಪರ್ಕಿಸಿ ನಿಜಾಂಶವನ್ನು ವಿಚಾರಿಸಬೇಕು’ ಎಂದು ಬಿಡಿಎ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆಲವು ವಂಚಕರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಹೆಸರನ್ನು ದುರುಪಯೋಗಪಡಿಸಿಕೊಂಡು ನಾಗರಿಕ ಸೌಲಭ್ಯ ನಿವೇಶನಗಳು ಹಾಗೂ ಅಕ್ರಮ-ಸಕ್ರಮಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರನ್ನು ಮೋಸಗೊಳಿಸುತ್ತಿದ್ದಾರೆ. ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಬಿಡಿಎ ಆಯುಕ್ತ ಎಚ್.ಆರ್.ಮಹದೇವ್ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.</p>.<p>‘ಪ್ರಾಧಿಕಾರವು ಅಭಿವೃದ್ಧಿಪಡಿಸಿರುವ ಬಡಾವಣೆಗಳಲ್ಲಿ ನಾಗರಿಕ ಸೌಲಭ್ಯ ನಿವೇಶನಗಳನ್ನು ನಿರ್ದಿಷ್ಟ ಉದ್ದೇಶಕ್ಕಾಗಿ ಗುತ್ತಿಗೆ ಆಧಾರದ ಮೇಲೆ ಹಂಚಿಕೆ ಮಾಡಲಾಗಿದೆ. ಕೆಲವು ಕಿಡಿಗೇಡಿಗಳು ಪ್ರಾಧಿಕಾರದ ಪತ್ರಗಳು, ಅಧಿಕಾರಿಗಳ ಸಹಿ, ಮೊಹರುಗಳನ್ನು ನಕಲು ಮಾಡಿ, ನಾಗರಿಕ ಸೌಲಭ್ಯ ನಿವೇಶನಗಳನ್ನು ಗುತ್ತಿಗೆ ಪಡೆದಿರುವ ಸಂಘ-ಸಂಸ್ಥೆಗಳಿಗೆ ಬಿಡಿಎ ಹೆಸರಿನಲ್ಲಿ ಪತ್ರಗಳನ್ನು ಕಳುಹಿಸುತ್ತಿದ್ದಾರೆ. ಹಂಚಿಕೆ ಮಾಡಲಾದ ನಾಗರಿಕ ಸೌಲಭ್ಯ ನಿವೇಶನ ಅನ್ಯ ಉದ್ದೇಶಕ್ಕೆ ಬಳಕೆಯಾಗುತ್ತಿರುವುದರಿಂದ ಗುತ್ತಿಗೆ ರದ್ದುಪಡಿಸಲಾಗುತ್ತಿದೆ ಎಂದು ಭಯ ಹುಟ್ಟಿಸಿ ಹಣವನ್ನು ವಸೂಲಿ ಮಾಡಿರುವುದು ಪತ್ತೆಯಾಗಿದೆ.’</p>.<p>‘ಅಕ್ರಮ-ಸಕ್ರಮಕ್ಕೆ ಸಂಬಂಧಿಸಿದಂತೆ, ಕೆಲವು ಮನೆ ಮಾಲೀಕರಿಗೆ ಹಾಗೂ ಭೂ ಮಾಲೀಕರಿಗೂ ಇದೇ ಮಾದರಿಯಲ್ಲಿ ವಂಚನೆ ನಡೆಸಿರುವುದು ಬೆಳಕಿಗೆ ಬಂದಿದೆ. ಕೆಲವು ವಂಚಕರು ಅಕ್ರಮ-ಸಕ್ರಮ ವ್ಯಾಪ್ತಿಗೆ ಒಳಪಡುವ ನಿವೇಶನ ಅಥವಾ ಮನೆ ಸಂಖ್ಯೆ ನಮೂದಿಸಿ, ಪ್ರಾಧಿಕಾರದ ಆಯುಕ್ತರ ಆದೇಶದ ಮೇರೆಗೆ ಎಂಬ ಒಕ್ಕಣೆಯ ಪತ್ರ ಕಳುಹಿಸುತ್ತಿದ್ದಾರೆ. ಮೊಬೈಲ್ ಮೂಲಕವೂ ಮಾಲೀಕರನ್ನು ಸಂಪರ್ಕಿಸಿ ಅಕ್ರಮ ಕಟ್ಟಡವನ್ನು ಸಕ್ರಮಗೊಳಿಸುವುದಾಗಿ ಹೇಳಿ ಹಣ ವಸೂಲಿ ಮಾಡುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿದೆ.’</p>.<p>‘ಇಂತಹ ನಕಲಿ ಪತ್ರಗಳ ಬಗ್ಗೆ ಪ್ರಾಧಿಕಾರದ ಜಾಗೃತ ದಳವು ತನಿಖೆಯನ್ನು ಪ್ರಾರಂಭಿಸಿದೆ. ಸಾರ್ವಜನಿಕರು ಪ್ರಾಧಿಕಾರದ ಹೆಸರಿನಲ್ಲಿ ಇಂತಹ ಯಾವುದೇ ಪತ್ರಗಳನ್ನು ಸ್ವೀಕರಿಸಿದರೆ, ಬಿಡಿಎ ಕೇ೦ದ್ರ ಕಚೇರಿಯನ್ನು ಸಂಪರ್ಕಿಸಿ ನಿಜಾಂಶವನ್ನು ವಿಚಾರಿಸಬೇಕು’ ಎಂದು ಬಿಡಿಎ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>