ಬೆಂಗಳೂರು:ಸ್ವಾತಂತ್ರ್ಯ ಅಮೃತ ಮಹೋತ್ಸವ ಪಾದಯಾತ್ರೆ ನಿಮಿತ್ತ ಕಾಂಗ್ರೆಸ್ ಬೆಂಗಳೂರಿನ ಹಡ್ಸನ್ ವೃತ್ತದಲ್ಲಿ ಅಳವಡಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ ಭಿತ್ತಿಚಿತ್ರಗಳ ಪೈಕಿ ಟಿಪ್ಪು ಸುಲ್ತಾನ್ ಭಿತ್ತಿಚಿತ್ರಕ್ಕೆ ಕೆಲ ಕಿಡಿಗೇಡಿಗಳು ಶನಿವಾರ ರಾತ್ರಿ ಹಾನಿ ಮಾಡಿದರು.
ಸುದ್ದಿ ತಿಳಿದ ತಕ್ಷಣ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಸಂಸದ ಡಿ ಕೆ ಸುರೇಶ್, ಮುಖಂಡರಾದ ವಿನಯ್ ಕಾರ್ತಿಕ್, ಹನುಮಂತರಾಯಪ್ಪ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಕಿಡಿಗೇಡಿಗಳನ್ನು ಬಂಧಿಸುವಂತೆ ಪೊಲೀಸ್ ಅಧಿಕಾರಿಗಳನ್ನು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.