<p><strong>ಬೆಂಗಳೂರು</strong>: ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ಮೂಟೆಕಟ್ಟಿ ಬಿಬಿಎಂಪಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದೆ.</p>.<p>ಸುಮಾರು 30–35 ವರ್ಷದ ಮಹಿಳೆಯ ಮೃತದೇಹವನ್ನು ಶನಿವಾರ ತಡರಾತ್ರಿ ಆಟೊದಲ್ಲಿ ತಂದ ದುಷ್ಕರ್ಮಿಗಳು, ಮೈದಾನ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿರಿಸಿ ಪರಾರಿಯಾಗಿದ್ದಾರೆ.</p>.<p>ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. </p>.<p>ಸ್ಥಳೀಯ ವ್ಯಕ್ತಿಯೊಬ್ಬರು ಕಸ ಹಾಕಲು ಬಂದಿದ್ದ ವೇಳೆ ಮಹಿಳೆಯ ತಲೆ ಕೂದಲು ಕಾಣಿಸಿದೆ. ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಹಾಗೂ ಪೊಲೀಸರು ಭೇಟಿ ನೀಡಿ, ಶವವನ್ನು ಹೊರ ತೆಗೆದು ಪರಿಶೀಲನೆ ನಡೆಸಿದರು.</p>.<p>ಮೃತದೇಹ ಪತ್ತೆಯಾದ ಸ್ಥಳ, ಚೆನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶ, ಸ್ಕೇಟಿಂಗ್ ಮೈದಾನ ಸೇರಿದಂತೆ ಇತರೆ ಕಡೆಗಳಲ್ಲಿನ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿದರು. </p>.<p>ಈ ಪ್ರದೇಶದಲ್ಲಿ ರಾತ್ರಿ ವೇಳೆ ಜನ ಸಂಚಾರ ಕಡಿಮೆ ಇರುವುದನ್ನು ಗಮನಿಸಿ, ಬೇರೆ ಕಡೆ ಕೊಲೆ ಮಾಡಿ, ಆಟೊದಲ್ಲಿ ಶವವನ್ನು ತಂದು ಇಲ್ಲಿ ಎಸೆದು ಹೋಗಿರಬಹುದು ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.</p>.<p>‘ಮಹಿಳೆಯ ಮೃತದೇಹ ಕಸದ ಲಾರಿಯಲ್ಲಿ ಪತ್ತೆಯಾಗಿದ್ದು, ವಿಳಾಸ ತಿಳಿದು ಬಂದಿಲ್ಲ. ಕೊಲೆಗೆ ಕಾರಣ, ಯಾರು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ಮೂಟೆಕಟ್ಟಿ ಬಿಬಿಎಂಪಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದೆ.</p>.<p>ಸುಮಾರು 30–35 ವರ್ಷದ ಮಹಿಳೆಯ ಮೃತದೇಹವನ್ನು ಶನಿವಾರ ತಡರಾತ್ರಿ ಆಟೊದಲ್ಲಿ ತಂದ ದುಷ್ಕರ್ಮಿಗಳು, ಮೈದಾನ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿರಿಸಿ ಪರಾರಿಯಾಗಿದ್ದಾರೆ.</p>.<p>ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. </p>.<p>ಸ್ಥಳೀಯ ವ್ಯಕ್ತಿಯೊಬ್ಬರು ಕಸ ಹಾಕಲು ಬಂದಿದ್ದ ವೇಳೆ ಮಹಿಳೆಯ ತಲೆ ಕೂದಲು ಕಾಣಿಸಿದೆ. ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಹಾಗೂ ಪೊಲೀಸರು ಭೇಟಿ ನೀಡಿ, ಶವವನ್ನು ಹೊರ ತೆಗೆದು ಪರಿಶೀಲನೆ ನಡೆಸಿದರು.</p>.<p>ಮೃತದೇಹ ಪತ್ತೆಯಾದ ಸ್ಥಳ, ಚೆನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶ, ಸ್ಕೇಟಿಂಗ್ ಮೈದಾನ ಸೇರಿದಂತೆ ಇತರೆ ಕಡೆಗಳಲ್ಲಿನ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿದರು. </p>.<p>ಈ ಪ್ರದೇಶದಲ್ಲಿ ರಾತ್ರಿ ವೇಳೆ ಜನ ಸಂಚಾರ ಕಡಿಮೆ ಇರುವುದನ್ನು ಗಮನಿಸಿ, ಬೇರೆ ಕಡೆ ಕೊಲೆ ಮಾಡಿ, ಆಟೊದಲ್ಲಿ ಶವವನ್ನು ತಂದು ಇಲ್ಲಿ ಎಸೆದು ಹೋಗಿರಬಹುದು ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.</p>.<p>‘ಮಹಿಳೆಯ ಮೃತದೇಹ ಕಸದ ಲಾರಿಯಲ್ಲಿ ಪತ್ತೆಯಾಗಿದ್ದು, ವಿಳಾಸ ತಿಳಿದು ಬಂದಿಲ್ಲ. ಕೊಲೆಗೆ ಕಾರಣ, ಯಾರು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>