<p><strong>ಯಲಹಂಕ: </strong>ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರುಗಳನ್ನು ಒಂದು ವಾರ್ಡ್ನಿಂದ ಮತ್ತೊಂದು ವಾರ್ಡ್ಗೆ ಸೇರಿಸಿ, ಅದಲು-ಬದಲು ಮಾಡುವ ಮೂಲಕ ಕಂದಾಯ ಇಲಾಖೆಯ ಅಧಿಕಾರಿಗಳು ಅಕ್ರಮವೆಸಗಿದ್ದಾರೆ ಎಂದು ಆರೋಪಿಸಿ ಬ್ಯಾಟರಾಯನಪುರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಕೆ.ಅಶೋಕನ್, ’ಚಿಕ್ಕಜಾಲದ ಗ್ರಾಮ ಲೆಕ್ಕಾಧಿಕಾರಿ ಸಂದೀಪ್ ಅವರು ಬಿಜೆಪಿಯವರ ಮಾತನ್ನು ಕೇಳಿಕೊಂಡು ರಾತ್ರೋರಾತ್ರಿ ಮತದಾರರ ಪಟ್ಟಿಯಲ್ಲಿ ಚಿಕ್ಕಜಾಲದ 4 ವಾರ್ಡ್ಗಳ ಮತದಾರರ ಹೆಸರುಗಳನ್ನು ಒಂದು ವಾರ್ಡ್ನಿಂದ ಮತ್ತೊಂದು ವಾರ್ಡ್ಗೆ ಸೇರಿಸುವ ಮೂಲಕ ಅಕ್ರಮ ಎಸಗಿದ್ದಾರೆ. ಇದರಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿಲ್ಲದಂತೆ ಅನಾನುಕೂಲವಾಗಿದೆ‘ ಎಂದು ಆರೋಪಿಸಿದರು.</p>.<p>’ಅವರ ಬಣ್ಣ ಬಯಲಾಗುತ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದು, ಈ ವ್ಯಕ್ತಿಯ ವಿರುದ್ಧ ಕೂಡಲೇ ಕಾನೂನುಕ್ರಮ ಕೈಗೊಳ್ಳುವುದರ ಜೊತೆಗೆ ಪಂಚಾಯಿತಿ ಚುನಾವಣೆಯನ್ನು ರದ್ಧುಪಡಿಸಬೇಕು. ಇಲ್ಲದಿದ್ದರೆ ಮತದಾರರ ಪಟ್ಟಿಯನ್ನು ಯಥಾಸ್ಥಿತಿಯಲ್ಲಿ ಸಿದ್ಧಪಡಿಸಬೇಕು‘ ಎಂದರು.</p>.<p>ಈ ಬಗ್ಗೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ತಪ್ಪಿದಲ್ಲಿ ಚುನಾವಣಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಸೋಮವಾರದಿಂದ ನಿರಂತರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ಉದಯಶಂಕರ್, ’ಚಿಕ್ಕಜಾಲ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ 4 ಸಾವಿರಕ್ಕೂ ಹೆಚ್ಚು ಮತದಾರರಿದ್ದಾರೆ. ಇದರಲ್ಲಿ ಒಂದು ಸಾವಿರಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಅಧಿಕಾರಿಗಳು ಅವೈಜ್ಞಾನಿಕವಾಗಿ ಒಂದು ವಾರ್ಡ್ನಿಂದ ಮತ್ತೊಂದು ವಾರ್ಡ್ಗೆ ಸೇರಿಸಿದ್ದಾರೆ. ಗ್ರಾಮಪಂಚಾಯಿತಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಉದ್ದೇಶಪೂರ್ವಕವಾಗಿ ಅನ್ಯಮಾರ್ಗದಿಂದ ಗೆಲ್ಲಲು ಬಿಜೆಪಿಯವರು ಈ ರೀತಿಯ ವಾಮಮಾರ್ಗ ಹಿಡಿದಿದ್ದಾರೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿ ಇಂತಹ ಅಕ್ರಮವೆಸಗಿದ್ದಾರೆ‘ ಎಂದು ದೂರಿದರು.</p>.<p>ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮೀಪತಿ, ’ಜನರನ್ನು ದಿಕ್ಕುತಪ್ಪಿಸುವ ಸಲುವಾಗಿ ಕಂದಾಯ ಅಧಿಕಾರಿಗಳು ಇಂತಹ ಅಕ್ರಮ ಎಸಗಿದ್ದಾರೆ. ಮತದಾರರು ವಾಸವಾಗಿರುವ ವಾರ್ಡ್ನಲ್ಲಿ ಮತದಾನ ಮಾಡಿದರೆ ಯಾವುದೇ ಕೆಲಸ ಮಾಡಿಸಿಕೊಳ್ಳಲು ಸಾಧ್ಯ. ಆದರೆ, ಮತ್ತೊಂದು ವಾರ್ಡ್ನಲ್ಲಿ ಮತದಾನ ಮಾಡುವುದರಿಂದ ಭವಿಷ್ಯದಲ್ಲಿ ಸಮಸ್ಯೆಯಾಗಲಿದೆ‘ ಎಂದರು.</p>.<p>ಮನವಿ ಸ್ವೀಕರಿಸಿ ಪ್ರತಿಕ್ರಿಯಿಸಿದ ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ’ಮತದಾರರ ಪಟ್ಟಿಯಲ್ಲಿ ಹೆಸರುಗಳು ಒಂದು ವಾರ್ಡ್ನಿಂದ ಮತ್ತೊಂದು ವಾರ್ಡ್ ಗೆ ಸೇರ್ಪಡೆಯಾಗಿವೆ ಎಂದು ಚಿಕ್ಕಜಾಲ ಸುತ್ತಮುತ್ತಲ ಗ್ರಾಮಗಳ ನಿವಾಸಿಗಳು ದೂರು ನೀಡಿದ್ದಾರೆ. ಈ ಬಗ್ಗೆ ಈಗಾಗಲೇ ಪರಿಶೀಲಿಸಿ, ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಆ ರೀತಿಯ ವ್ಯತ್ಯಾಸವಾಗಿದ್ದರೆ ಕಾನುನುಕ್ರಮ ಕೈಗೊಳ್ಳಲಾಗುವುದು‘ ಎಂದು ತಿಳಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಎಂ.ಜಯಗೋಪಾಲಗೌಡ, ಎನ್.ಎನ್.ಶ್ರೀನಿವಾಸಯ್ಯ, ಜಾಲಾ ಕಿಟ್ಟಿ, ಎಚ್.ಎ.ಶಿವಕುಮಾರ್, ಗೌರೀಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ: </strong>ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರುಗಳನ್ನು ಒಂದು ವಾರ್ಡ್ನಿಂದ ಮತ್ತೊಂದು ವಾರ್ಡ್ಗೆ ಸೇರಿಸಿ, ಅದಲು-ಬದಲು ಮಾಡುವ ಮೂಲಕ ಕಂದಾಯ ಇಲಾಖೆಯ ಅಧಿಕಾರಿಗಳು ಅಕ್ರಮವೆಸಗಿದ್ದಾರೆ ಎಂದು ಆರೋಪಿಸಿ ಬ್ಯಾಟರಾಯನಪುರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಕೆ.ಅಶೋಕನ್, ’ಚಿಕ್ಕಜಾಲದ ಗ್ರಾಮ ಲೆಕ್ಕಾಧಿಕಾರಿ ಸಂದೀಪ್ ಅವರು ಬಿಜೆಪಿಯವರ ಮಾತನ್ನು ಕೇಳಿಕೊಂಡು ರಾತ್ರೋರಾತ್ರಿ ಮತದಾರರ ಪಟ್ಟಿಯಲ್ಲಿ ಚಿಕ್ಕಜಾಲದ 4 ವಾರ್ಡ್ಗಳ ಮತದಾರರ ಹೆಸರುಗಳನ್ನು ಒಂದು ವಾರ್ಡ್ನಿಂದ ಮತ್ತೊಂದು ವಾರ್ಡ್ಗೆ ಸೇರಿಸುವ ಮೂಲಕ ಅಕ್ರಮ ಎಸಗಿದ್ದಾರೆ. ಇದರಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿಲ್ಲದಂತೆ ಅನಾನುಕೂಲವಾಗಿದೆ‘ ಎಂದು ಆರೋಪಿಸಿದರು.</p>.<p>’ಅವರ ಬಣ್ಣ ಬಯಲಾಗುತ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದು, ಈ ವ್ಯಕ್ತಿಯ ವಿರುದ್ಧ ಕೂಡಲೇ ಕಾನೂನುಕ್ರಮ ಕೈಗೊಳ್ಳುವುದರ ಜೊತೆಗೆ ಪಂಚಾಯಿತಿ ಚುನಾವಣೆಯನ್ನು ರದ್ಧುಪಡಿಸಬೇಕು. ಇಲ್ಲದಿದ್ದರೆ ಮತದಾರರ ಪಟ್ಟಿಯನ್ನು ಯಥಾಸ್ಥಿತಿಯಲ್ಲಿ ಸಿದ್ಧಪಡಿಸಬೇಕು‘ ಎಂದರು.</p>.<p>ಈ ಬಗ್ಗೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ತಪ್ಪಿದಲ್ಲಿ ಚುನಾವಣಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಸೋಮವಾರದಿಂದ ನಿರಂತರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಸದಸ್ಯ ಉದಯಶಂಕರ್, ’ಚಿಕ್ಕಜಾಲ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ 4 ಸಾವಿರಕ್ಕೂ ಹೆಚ್ಚು ಮತದಾರರಿದ್ದಾರೆ. ಇದರಲ್ಲಿ ಒಂದು ಸಾವಿರಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಅಧಿಕಾರಿಗಳು ಅವೈಜ್ಞಾನಿಕವಾಗಿ ಒಂದು ವಾರ್ಡ್ನಿಂದ ಮತ್ತೊಂದು ವಾರ್ಡ್ಗೆ ಸೇರಿಸಿದ್ದಾರೆ. ಗ್ರಾಮಪಂಚಾಯಿತಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಉದ್ದೇಶಪೂರ್ವಕವಾಗಿ ಅನ್ಯಮಾರ್ಗದಿಂದ ಗೆಲ್ಲಲು ಬಿಜೆಪಿಯವರು ಈ ರೀತಿಯ ವಾಮಮಾರ್ಗ ಹಿಡಿದಿದ್ದಾರೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿ ಇಂತಹ ಅಕ್ರಮವೆಸಗಿದ್ದಾರೆ‘ ಎಂದು ದೂರಿದರು.</p>.<p>ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮೀಪತಿ, ’ಜನರನ್ನು ದಿಕ್ಕುತಪ್ಪಿಸುವ ಸಲುವಾಗಿ ಕಂದಾಯ ಅಧಿಕಾರಿಗಳು ಇಂತಹ ಅಕ್ರಮ ಎಸಗಿದ್ದಾರೆ. ಮತದಾರರು ವಾಸವಾಗಿರುವ ವಾರ್ಡ್ನಲ್ಲಿ ಮತದಾನ ಮಾಡಿದರೆ ಯಾವುದೇ ಕೆಲಸ ಮಾಡಿಸಿಕೊಳ್ಳಲು ಸಾಧ್ಯ. ಆದರೆ, ಮತ್ತೊಂದು ವಾರ್ಡ್ನಲ್ಲಿ ಮತದಾನ ಮಾಡುವುದರಿಂದ ಭವಿಷ್ಯದಲ್ಲಿ ಸಮಸ್ಯೆಯಾಗಲಿದೆ‘ ಎಂದರು.</p>.<p>ಮನವಿ ಸ್ವೀಕರಿಸಿ ಪ್ರತಿಕ್ರಿಯಿಸಿದ ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ’ಮತದಾರರ ಪಟ್ಟಿಯಲ್ಲಿ ಹೆಸರುಗಳು ಒಂದು ವಾರ್ಡ್ನಿಂದ ಮತ್ತೊಂದು ವಾರ್ಡ್ ಗೆ ಸೇರ್ಪಡೆಯಾಗಿವೆ ಎಂದು ಚಿಕ್ಕಜಾಲ ಸುತ್ತಮುತ್ತಲ ಗ್ರಾಮಗಳ ನಿವಾಸಿಗಳು ದೂರು ನೀಡಿದ್ದಾರೆ. ಈ ಬಗ್ಗೆ ಈಗಾಗಲೇ ಪರಿಶೀಲಿಸಿ, ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಆ ರೀತಿಯ ವ್ಯತ್ಯಾಸವಾಗಿದ್ದರೆ ಕಾನುನುಕ್ರಮ ಕೈಗೊಳ್ಳಲಾಗುವುದು‘ ಎಂದು ತಿಳಿಸಿದರು.</p>.<p>ಕಾಂಗ್ರೆಸ್ ಮುಖಂಡರಾದ ಎಂ.ಜಯಗೋಪಾಲಗೌಡ, ಎನ್.ಎನ್.ಶ್ರೀನಿವಾಸಯ್ಯ, ಜಾಲಾ ಕಿಟ್ಟಿ, ಎಚ್.ಎ.ಶಿವಕುಮಾರ್, ಗೌರೀಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>