ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈಕಲ್‌ಗೆ ಗುದ್ದಿದ ಮಿಕ್ಸರ್ ಲಾರಿ: ಸವಾರ ಸಾವು

Last Updated 30 ಸೆಪ್ಟೆಂಬರ್ 2022, 3:12 IST
ಅಕ್ಷರ ಗಾತ್ರ

ಬೆಂಗಳೂರು: ಮೈಸೂರು ರಸ್ತೆಯ ಬಿಜಿಎಸ್ ಮೇಲ್ಸೇತುವೆಯ ಡೌನ್‌ ರ‍್ಯಾಂಪ್‌ನಲ್ಲಿ ಸಿಮೆಂಟ್ ಮಿಕ್ಸರ್ ಲಾರಿಯೊಂದು ಸೈಕಲ್‌ಗೆ ಗುದ್ದಿದ್ದು, ಸವಾರ ಅಲೀಂ ಉಲ್ಲ ಷರೀಫ್ (23) ಎಂಬುವರು ಮೃತಪಟ್ಟಿದ್ದಾರೆ.

‘ಬಾಪೂಜಿನಗರದ ಅಲೀಂ ಅವರು ಬುಧವಾರ ರಾತ್ರಿ ಸೈಕಲ್‌ನಲ್ಲಿ ಮನೆಯತ್ತ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದ ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಚಿಕ್ಕಪೇಟೆ ಸಂಚಾರ ಪೊಲೀಸರು ಹೇಳಿದರು.

‘ಕೆಲಸಕ್ಕೆಂದು ಮನೆಯಿಂದ ಹೊರಗೆ ಬಂದಿದ್ದ ಅಲೀಂ, ವಾಪಸು ರಾತ್ರಿ 10.30ರ ಸುಮಾರಿಗೆ ಸೈಕಲ್‌ನಲ್ಲಿ ಮನೆಗೆ ಹೊರಟಿದ್ದರು. ಮೇಲ್ಸೇತುವೆಯ ಡೌನ್‌ ರ‍್ಯಾಂಪ್‌ ಮೂಲಕ ಅತಿ ವೇಗವಾಗಿ ಬಂದ ಮಿಕ್ಸರ್ ಲಾರಿ, ಸೈಕಲ್‌ಗೆ ಗುದ್ದಿತ್ತು. ಇದರಿಂದಾಗಿ ಅಲೀಂ ಅವರು ತೀವ್ರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಮಾರ್ಗಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು’ ಎಂದು ವಿವರಿಸಿದರು.

‘ಮಿಕ್ಸರ್ ಲಾರಿ (ಕೆಎ 01 ಎಸಿ 3862) ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಅಪಘಾತದ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT