<p>ಬೆಂಗಳೂರು: ಪುಲಕೇಶಿನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಸಿ. ಶ್ರೀನಿವಾಸ್ ಅವರು ಕ್ರಿಸ್ಮಸ್ ಮತ್ತು ಸಂಕ್ರಾಂತಿ ಹಬ್ಬದ ಪ್ರಯುಕ್ತ 10 ಸಾವಿರ ಕುಟುಂಬಗಳಿಗೆ ಪೆರಿಯಾರ್ ನಗರದ ಪುಟ್ಬಾಲ್ ಕ್ರೀಡಾಂಗಣದಲ್ಲಿ ಮಂಗಳವಾರ ದಿನಸಿ ಕಿಟ್ಗಳನ್ನು ವಿತರಿಸಿದರು.</p>.<p>‘ಕೂಲಿ ಕಾರ್ಮಿಕರು ಮತ್ತು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು ನೆಮ್ಮದಿಯಿಂದ ಹಬ್ಬ ಆಚರಿಸಬೇಕು ಎಂಬುದು ಈ ಕಾರ್ಯಕ್ರಮದ ಉದ್ದೇಶ. ಕುಡಿಯುವ ನೀರಿನ ವ್ಯವಸ್ದೆ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗಾಗಿ ₹ 800 ಕೋಟಿ ವೆಚ್ಚದ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ’ ಶ್ರೀನಿವಾಸ್ ಎಂದು ಮಾಹಿತಿ ನೀಡಿದರು.</p>.<p>ಹೋಲಿಗೋಸ್ಟ್ ಚರ್ಚ್ನ ಫಾದರ್ ಚಲುವಮುತ್ತು ಮಾತನಾಡಿ, ‘ಜಾತಿ, ಧರ್ಮ, ಬಡವ, ಶ್ರೀಮಂತ ಎಂಬ ಸಾಮಾಜಿಕ ಕಟ್ಟಳೆಗಳನ್ನು ಮೀರಿ ಎಲ್ಲರೂ ಸೌಹಾರ್ದದಿಂದ ಜೀವನ ನಡೆಸಬೇಕು. ಹಸಿದವರಿಗೆ ಅನ್ನ, ನೀರು, ಅಕ್ಷರ ಮತ್ತು ಸಂಸ್ಕಾರ ನೀಡುವವರೇ ನಿಜವಾದ ಜನನಾಯಕರು’ ಎಂದರು.</p>.<p>ಕಾಂಗ್ರೆಸ್ ಮುಖಂಡರಾದ ಅಬ್ದುಲ್ ವಾಜಿದ್, ಪ್ರೊ. ಎಂ.ವಿ.ರಾಜೀವ್ ಗೌಡ, ಜಾಕೀರ್, ಎ. ಸಿ. ಹರಿಪ್ರಸಾದ್, ಮುಜಾಹಿದ್ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಪುಲಕೇಶಿನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಸಿ. ಶ್ರೀನಿವಾಸ್ ಅವರು ಕ್ರಿಸ್ಮಸ್ ಮತ್ತು ಸಂಕ್ರಾಂತಿ ಹಬ್ಬದ ಪ್ರಯುಕ್ತ 10 ಸಾವಿರ ಕುಟುಂಬಗಳಿಗೆ ಪೆರಿಯಾರ್ ನಗರದ ಪುಟ್ಬಾಲ್ ಕ್ರೀಡಾಂಗಣದಲ್ಲಿ ಮಂಗಳವಾರ ದಿನಸಿ ಕಿಟ್ಗಳನ್ನು ವಿತರಿಸಿದರು.</p>.<p>‘ಕೂಲಿ ಕಾರ್ಮಿಕರು ಮತ್ತು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು ನೆಮ್ಮದಿಯಿಂದ ಹಬ್ಬ ಆಚರಿಸಬೇಕು ಎಂಬುದು ಈ ಕಾರ್ಯಕ್ರಮದ ಉದ್ದೇಶ. ಕುಡಿಯುವ ನೀರಿನ ವ್ಯವಸ್ದೆ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗಾಗಿ ₹ 800 ಕೋಟಿ ವೆಚ್ಚದ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ’ ಶ್ರೀನಿವಾಸ್ ಎಂದು ಮಾಹಿತಿ ನೀಡಿದರು.</p>.<p>ಹೋಲಿಗೋಸ್ಟ್ ಚರ್ಚ್ನ ಫಾದರ್ ಚಲುವಮುತ್ತು ಮಾತನಾಡಿ, ‘ಜಾತಿ, ಧರ್ಮ, ಬಡವ, ಶ್ರೀಮಂತ ಎಂಬ ಸಾಮಾಜಿಕ ಕಟ್ಟಳೆಗಳನ್ನು ಮೀರಿ ಎಲ್ಲರೂ ಸೌಹಾರ್ದದಿಂದ ಜೀವನ ನಡೆಸಬೇಕು. ಹಸಿದವರಿಗೆ ಅನ್ನ, ನೀರು, ಅಕ್ಷರ ಮತ್ತು ಸಂಸ್ಕಾರ ನೀಡುವವರೇ ನಿಜವಾದ ಜನನಾಯಕರು’ ಎಂದರು.</p>.<p>ಕಾಂಗ್ರೆಸ್ ಮುಖಂಡರಾದ ಅಬ್ದುಲ್ ವಾಜಿದ್, ಪ್ರೊ. ಎಂ.ವಿ.ರಾಜೀವ್ ಗೌಡ, ಜಾಕೀರ್, ಎ. ಸಿ. ಹರಿಪ್ರಸಾದ್, ಮುಜಾಹಿದ್ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>