‘ನಾನು ಕಾಣೆಯಾಗಿದ್ದೇನೆ ಎಂದು ಕೆಲವರು ಇತ್ತೀಚೆಗೆ ಠಾಣೆಗೆ ದೂರು ನೀಡಿದ್ದರು. ಈ ವಿಷಯ ಮಾಧ್ಯಮಗಳಲ್ಲಿ ಓದಿ ಗಮನಿಸಿದ್ದೇನೆ. ನಾನೆಲ್ಲಿಯೂ ಹೋಗಿಲ್ಲ. ನಮ್ಮ ತಂದೆ ಪೃಥ್ವಿರಾಜ್ ಸಿಂಗ್ ಅನಾರೋಗ್ಯದಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಚಿಕಿತ್ಸೆ ಕೊಡಿಸಿ ಮರಳಿದ್ದೇನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಎಲ್ಲ ದಾಖಲೆಗಳನ್ನು ಪೊಲೀಸ್ ಅಧಿಕಾರಿಗೆ ಕೊಟ್ಟಿದ್ದೇನೆ’ ಎಂದು ಸಿಂಗ್ ಸಮಜಾಯಿಷಿ ನೀಡಿದ್ದಾರೆ.