<p><strong>ರಾಜರಾಜೇಶ್ವರಿನಗರ:</strong> ‘ಸರಿಯಾಗಿ ಕರ್ತವ್ಯ ನಿರ್ವಹಿಸದಿದ್ದ ಮೇಲೆ ಅಧಿಕಾರಿಗಳೇಕೆ ಇರಬೇಕು? ಬಡವರ ಮೇಲೇಕೆ ನಿರ್ಲಕ್ಷ್ಯ? ಇಂಥವರಿಂದ ಸರ್ಕಾರ ಮುಜುಗರ ಅನುಭವಿಸುವಂತಾಗಿದೆ’ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಶಾಸಕ ಎಸ್.ಟಿ.ಸೋಮಶೇಖರ್ ಬೇಸರ ವ್ಯಕ್ತಪಡಿಸಿದರು.</p>.<p>ಜಿ.ಹೊಸಹಳ್ಳಿಯಲ್ಲಿ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಿರುವ 20 ಮನೆಗಳ ಕೀಲಿಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿ ಮಾತನಾಡಿ, ‘ಎರಡು ವರ್ಷದ ಹಿಂದೆ ಬಡವರಿಗಾಗಿ 860 ಮನೆಗಳನ್ನು ನಿರ್ಮಿಸಲು ಹಣ ಬಿಡುಗಡೆ ಮಾಡಿ ಮಂಜೂರಾತಿ ದೊರಕಿಸಿಕೊಟ್ಟಿದ್ದರೂ ಮನೆ ನಿರ್ಮಿಸಿಕೊಟ್ಟಿಲ್ಲ. ಬಡವರಿಗೆ ಮನೆ ನಿರ್ಮಿಸಿಕೊಡಲು 2 ವರ್ಷ ಬೇಕೆ?’ ಎಂದು ಗುತ್ತಿಗೆದಾರನನ್ನು ಅವರು ಪ್ರಶ್ನಿಸಿದರು.</p>.<p>ಬಿಬಿಎಂಪಿ ಸದಸ್ಯ ಎಸ್.ವಾಸುದೇವ್, ‘ದೊಡ್ಡಬಿದರಕಲ್ಲು ವ್ಯಾಪ್ತಿಯಲ್ಲಿ 186 ಮನೆಗಳ ಕಾಮಗಾರಿ ಕೈಗೊಳ್ಳಲಾಗಿದೆ. ಕಾರ್ಯಪಾಲಕ ಎಂಜಿನಿಯರ್, ಆಯುಕ್ತರು ಮುಂದೆ ಬಂದು ಕಾಮಗಾರಿ ಪರಿಶೀಲನೆ ಮಾಡಬೇಕು. ಯಾವುದೇ ಇಲಾಖೆಯಾದರೂ ಮುತುವರ್ಜಿ ವಹಿಸಬೇಕು’ ಎಂದರು.</p>.<p>ಪ್ರವಾಸೋದ್ಯಮ ನಿಗಮದ ಮಾಜಿ ನಿರ್ದೇಶಕ ಸತೀಶ್, ತಾಪಂ ಮಾಜಿ ಅಧ್ಯಕ್ಷ ಬಿ.ಅನಿಲ್ಕುಮಾರ್, ಗ್ರಾ. ಪಂ. ಮಾಜಿ ಸದಸ್ಯ ಪೂರ್ವಯ್ಯ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ:</strong> ‘ಸರಿಯಾಗಿ ಕರ್ತವ್ಯ ನಿರ್ವಹಿಸದಿದ್ದ ಮೇಲೆ ಅಧಿಕಾರಿಗಳೇಕೆ ಇರಬೇಕು? ಬಡವರ ಮೇಲೇಕೆ ನಿರ್ಲಕ್ಷ್ಯ? ಇಂಥವರಿಂದ ಸರ್ಕಾರ ಮುಜುಗರ ಅನುಭವಿಸುವಂತಾಗಿದೆ’ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಶಾಸಕ ಎಸ್.ಟಿ.ಸೋಮಶೇಖರ್ ಬೇಸರ ವ್ಯಕ್ತಪಡಿಸಿದರು.</p>.<p>ಜಿ.ಹೊಸಹಳ್ಳಿಯಲ್ಲಿ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಿರುವ 20 ಮನೆಗಳ ಕೀಲಿಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿ ಮಾತನಾಡಿ, ‘ಎರಡು ವರ್ಷದ ಹಿಂದೆ ಬಡವರಿಗಾಗಿ 860 ಮನೆಗಳನ್ನು ನಿರ್ಮಿಸಲು ಹಣ ಬಿಡುಗಡೆ ಮಾಡಿ ಮಂಜೂರಾತಿ ದೊರಕಿಸಿಕೊಟ್ಟಿದ್ದರೂ ಮನೆ ನಿರ್ಮಿಸಿಕೊಟ್ಟಿಲ್ಲ. ಬಡವರಿಗೆ ಮನೆ ನಿರ್ಮಿಸಿಕೊಡಲು 2 ವರ್ಷ ಬೇಕೆ?’ ಎಂದು ಗುತ್ತಿಗೆದಾರನನ್ನು ಅವರು ಪ್ರಶ್ನಿಸಿದರು.</p>.<p>ಬಿಬಿಎಂಪಿ ಸದಸ್ಯ ಎಸ್.ವಾಸುದೇವ್, ‘ದೊಡ್ಡಬಿದರಕಲ್ಲು ವ್ಯಾಪ್ತಿಯಲ್ಲಿ 186 ಮನೆಗಳ ಕಾಮಗಾರಿ ಕೈಗೊಳ್ಳಲಾಗಿದೆ. ಕಾರ್ಯಪಾಲಕ ಎಂಜಿನಿಯರ್, ಆಯುಕ್ತರು ಮುಂದೆ ಬಂದು ಕಾಮಗಾರಿ ಪರಿಶೀಲನೆ ಮಾಡಬೇಕು. ಯಾವುದೇ ಇಲಾಖೆಯಾದರೂ ಮುತುವರ್ಜಿ ವಹಿಸಬೇಕು’ ಎಂದರು.</p>.<p>ಪ್ರವಾಸೋದ್ಯಮ ನಿಗಮದ ಮಾಜಿ ನಿರ್ದೇಶಕ ಸತೀಶ್, ತಾಪಂ ಮಾಜಿ ಅಧ್ಯಕ್ಷ ಬಿ.ಅನಿಲ್ಕುಮಾರ್, ಗ್ರಾ. ಪಂ. ಮಾಜಿ ಸದಸ್ಯ ಪೂರ್ವಯ್ಯ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>