ಕಾಂಗ್ರೆಸ್ನ ಕೆ.ಎಂ. ಶಿವಲಿಂಗೇಗೌಡ ಮಾತನಾಡಿ, ‘ಮಾರುಕಟ್ಟೆಯಲ್ಲಿ ಕೊಬ್ಬರಿ ದರ ಕ್ವಿಂಟಲ್ಗೆ ₹10,000 ಇದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ₹12,000 ನಿಗದಿ ಮಾಡಲಾಗಿದೆ. ರಾಜ್ಯ ಸರ್ಕಾರ ಪ್ರತಿ ಕ್ವಿಂಟಲ್ಗೆ ₹1,500 ಪ್ರೋತ್ಸಾಹಧನ ನೀಡುತ್ತಿದೆ. ಕೇಂದ್ರ ಸರ್ಕಾರವನ್ನು ಮಾತ್ರ ಹೊಗಳಿದರೆ ಸಾಲದು, ರಾಜ್ಯ ಸರ್ಕಾರದ ಕೊಡುಗೆಯನ್ನೂ ಹೇಳಬೇಕು’ ಎಂದರು.