<p><strong>ಬೆಂಗಳೂರು:</strong> ಬಿಜೆಪಿಯನ್ನು ಟೀಕಿಸುವ ಭರದಲ್ಲಿ ‘ಕರಗ’ ಕುರಿತು ಉಲ್ಲೇಖಿಸಿರುವುದಕ್ಕಾಗಿ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ. ಹ್ಯಾರಿಸ್ ಅವರು, ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿ ಕ್ಷಮೆ ಯಾಚಿಸಿದರು.</p>.<p>ಬಿಜೆಪಿ ಕಾರ್ಯಕರ್ತರು ತಡರಾತ್ರಿ ಪ್ರಚಾರ ನಡೆಸುತ್ತಿರುವ ಕುರಿತು ಇತ್ತೀಚೆಗೆ ಪ್ರತಿಕ್ರಿಯಿಸಿದ್ದ ಹ್ಯಾರಿಸ್, ‘ಕರಗ ಬಂದಂತೆ ಮಾಡುತ್ತಾರೆ’ ಎಂದಿದ್ದರು. ಈ ಹೇಳಿಕೆಯ ವಿಡಿಯೊ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು, ‘ಶಾಸಕ ಹ್ಯಾರಿಸ್ ಅವರು ಕರಗವನ್ನು ನಾಟಕಕ್ಕೆ ಹೋಲಿಸಿ ಅವಮಾನ ಮಾಡಿದ್ದಾರೆ’ ಎಂದು ಆರೋಪಿಸಲಾಗಿತ್ತು. ಈ ಪ್ರಕರಣ ಹೆಚ್ಚು ಚರ್ಚೆಗೆ ಒಳಗಾಗುತ್ತಿರುವ ಕಾರಣದಿಂದ ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ದೇವಸ್ಥಾನದ ಆಡಳಿತ ಮಂಡಳಿ ಪ್ರಮುಖರು ಹಾಗೂ ತಿಗಳ ಸಮುದಾಯದ ಮುಖಂಡರಿಗೆ ತಮ್ಮ ಹೇಳಿಕೆಯ ಕುರಿತು ಸ್ಪಷ್ಟನೆ ನೀಡಿದರು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಹ್ಯಾರಿಸ್, ‘ನಾನು ಬಿಜೆಪಿಯವರು ತಡರಾತ್ರಿ ಗುಂಪುಗೂಡಿ ಬರುವ ಕುರಿತು ಮಾತನಾಡಿದ್ದೆ. ಅದನ್ನೇ ತಿರುಚಿ ಕರಗವನ್ನು ಅವಮಾನಿಸಿದ್ದೆ ಎಂದು ಬಿಂಬಿಸಲು ಕೆಲವರು ಯತ್ನಿಸುತ್ತಿದ್ದಾರೆ.ಹೀಗಾಗಿ ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ಧರ್ಮರಾಯಸ್ವಾಮಿ ದೇವಸ್ಥಾನದಲ್ಲೇ ಹೇಳಿದ್ದೇನೆ’ ಎಂದರು.</p>.<p>‘ಕರಗ ನಮ್ಮ ಬೆಂಗಳೂರಿನ ಹೆಮ್ಮೆ. ಅದರಲ್ಲಿ ಜಾತ್ಯತೀತವಾದ ಆಚರಣೆ ಇದೆ. ಈವರೆಗೆ ಯಾವುದೇ ಧರ್ಮದ ವಿಚಾರವನ್ನೂ ಅವಮಾನಿಸಿದ ವ್ಯಕ್ತಿ ನಾನಲ್ಲ. ಅಂತಹ ಯೋಚನೆಯೂ ನನ್ನಲ್ಲಿ ಇಲ್ಲ. ಕೆಲವರು ರಾಜಕೀಯ ದುರುದ್ದೇಶದಿಂದ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಜೆಪಿಯನ್ನು ಟೀಕಿಸುವ ಭರದಲ್ಲಿ ‘ಕರಗ’ ಕುರಿತು ಉಲ್ಲೇಖಿಸಿರುವುದಕ್ಕಾಗಿ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ. ಹ್ಯಾರಿಸ್ ಅವರು, ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿ ಕ್ಷಮೆ ಯಾಚಿಸಿದರು.</p>.<p>ಬಿಜೆಪಿ ಕಾರ್ಯಕರ್ತರು ತಡರಾತ್ರಿ ಪ್ರಚಾರ ನಡೆಸುತ್ತಿರುವ ಕುರಿತು ಇತ್ತೀಚೆಗೆ ಪ್ರತಿಕ್ರಿಯಿಸಿದ್ದ ಹ್ಯಾರಿಸ್, ‘ಕರಗ ಬಂದಂತೆ ಮಾಡುತ್ತಾರೆ’ ಎಂದಿದ್ದರು. ಈ ಹೇಳಿಕೆಯ ವಿಡಿಯೊ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು, ‘ಶಾಸಕ ಹ್ಯಾರಿಸ್ ಅವರು ಕರಗವನ್ನು ನಾಟಕಕ್ಕೆ ಹೋಲಿಸಿ ಅವಮಾನ ಮಾಡಿದ್ದಾರೆ’ ಎಂದು ಆರೋಪಿಸಲಾಗಿತ್ತು. ಈ ಪ್ರಕರಣ ಹೆಚ್ಚು ಚರ್ಚೆಗೆ ಒಳಗಾಗುತ್ತಿರುವ ಕಾರಣದಿಂದ ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ದೇವಸ್ಥಾನದ ಆಡಳಿತ ಮಂಡಳಿ ಪ್ರಮುಖರು ಹಾಗೂ ತಿಗಳ ಸಮುದಾಯದ ಮುಖಂಡರಿಗೆ ತಮ್ಮ ಹೇಳಿಕೆಯ ಕುರಿತು ಸ್ಪಷ್ಟನೆ ನೀಡಿದರು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಹ್ಯಾರಿಸ್, ‘ನಾನು ಬಿಜೆಪಿಯವರು ತಡರಾತ್ರಿ ಗುಂಪುಗೂಡಿ ಬರುವ ಕುರಿತು ಮಾತನಾಡಿದ್ದೆ. ಅದನ್ನೇ ತಿರುಚಿ ಕರಗವನ್ನು ಅವಮಾನಿಸಿದ್ದೆ ಎಂದು ಬಿಂಬಿಸಲು ಕೆಲವರು ಯತ್ನಿಸುತ್ತಿದ್ದಾರೆ.ಹೀಗಾಗಿ ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ಧರ್ಮರಾಯಸ್ವಾಮಿ ದೇವಸ್ಥಾನದಲ್ಲೇ ಹೇಳಿದ್ದೇನೆ’ ಎಂದರು.</p>.<p>‘ಕರಗ ನಮ್ಮ ಬೆಂಗಳೂರಿನ ಹೆಮ್ಮೆ. ಅದರಲ್ಲಿ ಜಾತ್ಯತೀತವಾದ ಆಚರಣೆ ಇದೆ. ಈವರೆಗೆ ಯಾವುದೇ ಧರ್ಮದ ವಿಚಾರವನ್ನೂ ಅವಮಾನಿಸಿದ ವ್ಯಕ್ತಿ ನಾನಲ್ಲ. ಅಂತಹ ಯೋಚನೆಯೂ ನನ್ನಲ್ಲಿ ಇಲ್ಲ. ಕೆಲವರು ರಾಜಕೀಯ ದುರುದ್ದೇಶದಿಂದ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>