ಬಿಜೆಪಿ ಕಾರ್ಯಕರ್ತರು ತಡರಾತ್ರಿ ಪ್ರಚಾರ ನಡೆಸುತ್ತಿರುವ ಕುರಿತು ಇತ್ತೀಚೆಗೆ ಪ್ರತಿಕ್ರಿಯಿಸಿದ್ದ ಹ್ಯಾರಿಸ್, ‘ಕರಗ ಬಂದಂತೆ ಮಾಡುತ್ತಾರೆ’ ಎಂದಿದ್ದರು. ಈ ಹೇಳಿಕೆಯ ವಿಡಿಯೊ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು, ‘ಶಾಸಕ ಹ್ಯಾರಿಸ್ ಅವರು ಕರಗವನ್ನು ನಾಟಕಕ್ಕೆ ಹೋಲಿಸಿ ಅವಮಾನ ಮಾಡಿದ್ದಾರೆ’ ಎಂದು ಆರೋಪಿಸಲಾಗಿತ್ತು. ಈ ಪ್ರಕರಣ ಹೆಚ್ಚು ಚರ್ಚೆಗೆ ಒಳಗಾಗುತ್ತಿರುವ ಕಾರಣದಿಂದ ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ದೇವಸ್ಥಾನದ ಆಡಳಿತ ಮಂಡಳಿ ಪ್ರಮುಖರು ಹಾಗೂ ತಿಗಳ ಸಮುದಾಯದ ಮುಖಂಡರಿಗೆ ತಮ್ಮ ಹೇಳಿಕೆಯ ಕುರಿತು ಸ್ಪಷ್ಟನೆ ನೀಡಿದರು.