<p><strong>ಯಲಹಂಕ: </strong>ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಶ್ರೀರಾಮಪುರ ಬಳಿ ನಿರ್ಮಾಣವಾಗುತ್ತಿರುವ ರೈಲ್ವೆ ಕೆಳಸೇತುವೆ ಕಾಮಗಾರಿಯನ್ನು ಶಾಸಕ ಕೃಷ್ಣಬೈರೇಗೌಡ ರೈಲ್ವೆ ಮತ್ತು ಬಿಬಿಎಂಪಿ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.</p>.<p>ನಂತರ ಮಾತನಾಡಿದ ಅವರು, ’3–4 ವರ್ಷಗಳಿಂದ ಈ ಭಾಗದಲ್ಲಿ ಜನಸಂಖ್ಯೆ ಜಾಸ್ತಿಯಾಗಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ರೈಲ್ವೆಗೇಟ್ ಹಾಕಿದಾಗ ವಾಹನ ಸವಾರರು ತೊಂದರೆ ಅನುಭವಿಸಬೇಕಾಗಿತ್ತು. ಐದು ವರ್ಷಗಳ ಹಿಂದೆಯೇ ಈ ಸಮಸ್ಯೆ ಮನಗಂಡು ಇಲ್ಲಿ ಕೆಳಸೇತುವೆ ನಿರ್ಮಾಣ ಮಾಡಬೇಕೆಂದು ರೈಲ್ವೆಯವರಿಗೆ ಮನವಿ ಮಾಡಲಾಗಿತ್ತು. ರಾಜ್ಯ ಸರ್ಕಾರದಿಂದ ₹9 ಕೋಟಿ ಮತ್ತು ರೈಲ್ವೆಇಲಾಖೆಯಿಂದ ₹3 ಕೋಟಿ ಸೇರಿದಂತೆ ಒಟ್ಟು ₹12 ಕೋಟಿ ವೆಚ್ಛದಲ್ಲಿ ಕೈಗೊಂಡಿದ್ದ ಕಾಮಗಾರಿಯು ಬಹುತೇಕ ಮುಗಿಯುವ ಹಂತದಲ್ಲಿದೆ‘ ಎಂದು ತಿಳಿಸಿದರು.</p>.<p>’ಒಂದು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಿ, ಸಾರ್ವಜನಿಕರ ಸೇವೆಗೆ ಸಮರ್ಪಣೆ ಮಾಡಬೇಕೆಂಬ ಉದ್ದೇಶವಿದೆ. ಈ ಮಧ್ಯೆ, ವಾಹನಸಂಚಾರಕ್ಕೆ ಸಂಬಂಧಿಸಿದಂತೆ ಕೆಲವು ಸಣ್ಣಪುಟ್ಟ ಗೊಂದಲಗಳನ್ನು ನಿವಾರಿಸಲು ಮತ್ತು ಇತರೆಡೆಗಳಲ್ಲಿ ಮಳೆಬಂದಾಗ ಕೆಳಸೇತುವೆಯಲ್ಲಿ ನೀರುನಿಂತು ವಾಹನಸವಾರರು ತೊಂದರೆ ಅನುಭವಿಸುತ್ತಿದ್ದು, ಇಲ್ಲಿ ಅಂತಹ ಸಮಸ್ಯೆ ಮರುಕಳಿಸದಂತೆ ಸಾಧಕ-ಬಾಧಕಗಳ ಬಗ್ಗೆ ಪರಿಶೀಲಿಸಲು ಸ್ಥಳವೀಕ್ಷಣೆ ಮಾಡಲಾಗಿದೆ‘ ಎಂದರು.</p>.<p>’ಕೊಡಿಗೇಹಳ್ಳಿಯಲ್ಲಿ ನಿರ್ಮಿಸಿರುವ ರೈಲ್ವೆ ಕೆಳಸೇತುವೆಯು ತೊಂದರೆಗಳಿಂದ ಕೂಡಿದ್ದು, ಕಾಮಗಾರಿ ಕಳಪೆಯಾಗಿದೆ. ಅದಕ್ಕೆ ಹೋಲಿಸಿದರೆ ರೈಲ್ವೆ ಇಲಾಖೆಯವರು ಇಲ್ಲಿ ಗುಣಮಟ್ಟದ ಕಾಮಗಾರಿ ಮಾಡಿದ್ದಾರೆ. ಸಣ್ಣಪುಟ್ಟ ಬದಲಾವಣೆಗಳನ್ನು ಮಾಡಲಾಗಿದ್ದು, ಅದನ್ನು ಸರಿಪಡಿಸಿಕೊಂಡು ಕಾಮಗಾರಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ‘ ಎಂದರು.</p>.<p>ರೈಲ್ವೆ ಕಾಮಗಾರಿ ನಿರ್ಮಾಣ ಘಟಕದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆರ್.ವಳುತಿ, ಬಿಬಿಎಂಪಿ ರಸ್ತೆ, ಮೂಲಸೌಕರ್ಯ ಯಲಹಂಕ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೆಂಪೇಗೌಡ, ಕಾಂಗ್ರೆಸ್ ಮುಖಂಡರಾದ ಎಂ.ಜಯಗೋಪಾಲಗೌಡ, ಎನ್.ಎನ್.ಶ್ರೀನಿವಾಸಯ್ಯ, ಎಚ್.ಎ.ಶಿವಕುಮಾರ್, ಪಳನಿ ವೆಂಕಟೇಶ್, ಟಿ.ವೆಂಕಟರಾಮರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ: </strong>ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಶ್ರೀರಾಮಪುರ ಬಳಿ ನಿರ್ಮಾಣವಾಗುತ್ತಿರುವ ರೈಲ್ವೆ ಕೆಳಸೇತುವೆ ಕಾಮಗಾರಿಯನ್ನು ಶಾಸಕ ಕೃಷ್ಣಬೈರೇಗೌಡ ರೈಲ್ವೆ ಮತ್ತು ಬಿಬಿಎಂಪಿ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.</p>.<p>ನಂತರ ಮಾತನಾಡಿದ ಅವರು, ’3–4 ವರ್ಷಗಳಿಂದ ಈ ಭಾಗದಲ್ಲಿ ಜನಸಂಖ್ಯೆ ಜಾಸ್ತಿಯಾಗಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ರೈಲ್ವೆಗೇಟ್ ಹಾಕಿದಾಗ ವಾಹನ ಸವಾರರು ತೊಂದರೆ ಅನುಭವಿಸಬೇಕಾಗಿತ್ತು. ಐದು ವರ್ಷಗಳ ಹಿಂದೆಯೇ ಈ ಸಮಸ್ಯೆ ಮನಗಂಡು ಇಲ್ಲಿ ಕೆಳಸೇತುವೆ ನಿರ್ಮಾಣ ಮಾಡಬೇಕೆಂದು ರೈಲ್ವೆಯವರಿಗೆ ಮನವಿ ಮಾಡಲಾಗಿತ್ತು. ರಾಜ್ಯ ಸರ್ಕಾರದಿಂದ ₹9 ಕೋಟಿ ಮತ್ತು ರೈಲ್ವೆಇಲಾಖೆಯಿಂದ ₹3 ಕೋಟಿ ಸೇರಿದಂತೆ ಒಟ್ಟು ₹12 ಕೋಟಿ ವೆಚ್ಛದಲ್ಲಿ ಕೈಗೊಂಡಿದ್ದ ಕಾಮಗಾರಿಯು ಬಹುತೇಕ ಮುಗಿಯುವ ಹಂತದಲ್ಲಿದೆ‘ ಎಂದು ತಿಳಿಸಿದರು.</p>.<p>’ಒಂದು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಿ, ಸಾರ್ವಜನಿಕರ ಸೇವೆಗೆ ಸಮರ್ಪಣೆ ಮಾಡಬೇಕೆಂಬ ಉದ್ದೇಶವಿದೆ. ಈ ಮಧ್ಯೆ, ವಾಹನಸಂಚಾರಕ್ಕೆ ಸಂಬಂಧಿಸಿದಂತೆ ಕೆಲವು ಸಣ್ಣಪುಟ್ಟ ಗೊಂದಲಗಳನ್ನು ನಿವಾರಿಸಲು ಮತ್ತು ಇತರೆಡೆಗಳಲ್ಲಿ ಮಳೆಬಂದಾಗ ಕೆಳಸೇತುವೆಯಲ್ಲಿ ನೀರುನಿಂತು ವಾಹನಸವಾರರು ತೊಂದರೆ ಅನುಭವಿಸುತ್ತಿದ್ದು, ಇಲ್ಲಿ ಅಂತಹ ಸಮಸ್ಯೆ ಮರುಕಳಿಸದಂತೆ ಸಾಧಕ-ಬಾಧಕಗಳ ಬಗ್ಗೆ ಪರಿಶೀಲಿಸಲು ಸ್ಥಳವೀಕ್ಷಣೆ ಮಾಡಲಾಗಿದೆ‘ ಎಂದರು.</p>.<p>’ಕೊಡಿಗೇಹಳ್ಳಿಯಲ್ಲಿ ನಿರ್ಮಿಸಿರುವ ರೈಲ್ವೆ ಕೆಳಸೇತುವೆಯು ತೊಂದರೆಗಳಿಂದ ಕೂಡಿದ್ದು, ಕಾಮಗಾರಿ ಕಳಪೆಯಾಗಿದೆ. ಅದಕ್ಕೆ ಹೋಲಿಸಿದರೆ ರೈಲ್ವೆ ಇಲಾಖೆಯವರು ಇಲ್ಲಿ ಗುಣಮಟ್ಟದ ಕಾಮಗಾರಿ ಮಾಡಿದ್ದಾರೆ. ಸಣ್ಣಪುಟ್ಟ ಬದಲಾವಣೆಗಳನ್ನು ಮಾಡಲಾಗಿದ್ದು, ಅದನ್ನು ಸರಿಪಡಿಸಿಕೊಂಡು ಕಾಮಗಾರಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ‘ ಎಂದರು.</p>.<p>ರೈಲ್ವೆ ಕಾಮಗಾರಿ ನಿರ್ಮಾಣ ಘಟಕದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆರ್.ವಳುತಿ, ಬಿಬಿಎಂಪಿ ರಸ್ತೆ, ಮೂಲಸೌಕರ್ಯ ಯಲಹಂಕ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೆಂಪೇಗೌಡ, ಕಾಂಗ್ರೆಸ್ ಮುಖಂಡರಾದ ಎಂ.ಜಯಗೋಪಾಲಗೌಡ, ಎನ್.ಎನ್.ಶ್ರೀನಿವಾಸಯ್ಯ, ಎಚ್.ಎ.ಶಿವಕುಮಾರ್, ಪಳನಿ ವೆಂಕಟೇಶ್, ಟಿ.ವೆಂಕಟರಾಮರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>