‘ಈಗಿರುವ ಬೀದಿದೀಪಗಳನ್ನು ಎಲ್ಇಡಿ ದೀಪಗಳನ್ನಾಗಿ ಬದಲಿಸಲು ಒಂಟಿ ಪ್ಯಾಕೇಜ್ ಅಡಿ ಜಾಗತಿಕ ಟೆಂಡರ್ ಕರೆಯಲಾಗಿತ್ತು. ಈ ಪ್ರಕ್ರಿಯೆ ಪೂರ್ಣಗೊಂಡು ಕಾರ್ಯಾದೇಶ ನೀಡಿ ಎರಡು ವರ್ಷಗಳು ಕಳೆದರೂ ಕಾಮಗಾರಿ ಅನುಷ್ಠಾನಗೊಂಡಿಲ್ಲ. ಬೀದಿ ದೀಪಗಳು ಇಲ್ಲದ ಕಾರಣ, ದಾಸರಹಳ್ಳಿ ವ್ಯಾಪ್ತಿಯಲ್ಲಿ ರಾತ್ರಿಯ ವೇಳೆ ರಸ್ತೆ ಅಪಘಾತ ಹಾಗೂ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ’ ಎಂದು ಅವರು ಹೇಳಿದ್ದಾರೆ.