ಡಾಲರ್ಸ್ ಕಾಲೊನಿಯ ನಿವಾಸದಲ್ಲಿ ಸುಮಾರು 15 ನಿಮಿಷ ಮಾತುಕತೆ ನಡೆಸಿದರು. ಸಚಿವ ಸ್ಥಾನದ ಆಕಾಕ್ಷಿಯಾಗಿರುವ ನಾಗೇಶ್ ಅವರ ಭೇಟಿ ಮಹತ್ವ ಪಡೆದಿದೆ. ಯಡಿಯೂರಪ್ಪ ಅವರು ದೆಹಲಿಗೆ ಸಂಜೆ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಒಯ್ದಿದ್ದಾರೆ. ಪಟ್ಟಿಯಲ್ಲಿ ನಾಗೇಶ್ ಅವರ ಹೆಸರೂ ಸೇರಿದೆ ಎಂದು ಮೂಲಗಳು ಹೇಳಿವೆ. ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆಗೆ ಕೋರಲು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿರುವುದಾಗಿ ನಾಗೇಶ್ ಹೇಳಿದರು.