ಬೆಂಗಳೂರು: ಶಾಸಕ ಪ್ರಿಯಾಂಕ್ ಖರ್ಗೆ ಪತ್ನಿ ಶ್ರುತಿ ಅವರನ್ನು ಹಿಂಬಾಲಿಸಿದ್ದ ದುಷ್ಕರ್ಮಿಯೊಬ್ಬಮೊಬೈಲ್ ಕಸಿದು ಕೊಂಡು ಪರಾರಿಯಾಗಿದ್ದು, ಈ ಬಗ್ಗೆ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಶ್ರುತಿ ಅವರು ಭಾನುವಾರ ಬೆಳಿಗ್ಗೆ ವಾಯುವಿಹಾರಕ್ಕೆ ಹೋಗಿದ್ದಾಗ ಘಟನೆ ನಡೆದಿದೆ. ಪ್ರಿಯಾಂಕ್ ಅವರ ಆಪ್ತ ಸಹಾಯಕ ನೀಡಿದ ದೂರು ಆಧರಿಸಿ ಎಫ್ಐಆರ್ ದಾಖಲಿಸ ಲಾಗಿದೆ. ಘಟನಾ ಸ್ಥಳ ಹಾಗೂ ಸುತ್ತಮುತ್ತಲ ಸಿಸಿಟಿವಿ ಕ್ಯಾಮೆರಾದ ದೃಶ್ಯ ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.