<p><strong>ಬೆಂಗಳೂರು</strong>:‘ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ₹30 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಒಳಚರಂಡಿ ಕಾಮಗಾರಿ ಪೂರ್ಣವಾಗಿದ್ದು, ರಸ್ತೆಗಳ ಡಾಂಬರೀಕರಣ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು’ ಎಂದು ಶಾಸಕಆರ್.ಮಂಜುನಾಥ್ ತಿಳಿಸಿದರು.</p>.<p>ಪೀಣ್ಯ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ಮೂಲಸೌಕರ್ಯಗಳ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಪೀಣ್ಯ ಕೈಗಾರಿಕಾ ಸಂಘದ ಕಚೇರಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಪೀಣ್ಯ ಕೈಗಾರಿಕಾ ಪ್ರದೇಶವು ಲಕ್ಷಾಂತರ ಜನರಿಗೆ ಉದ್ಯೋಗ ಕಲ್ಪಿಸಿದೆ. ಇಲ್ಲಿನ ಕಂಪನಿಗಳು ಸರ್ಕಾರದ ಬೊಕ್ಕಸಕ್ಕೆ ಪ್ರತಿ ತಿಂಗಳು ಕೋಟಿಗಟ್ಟಲೆ ತೆರಿಗೆ ಪಾವತಿಸುತ್ತಿವೆ. ಆದರೆ, ಇಲ್ಲಿನ ಕೈಗಾರಿಕೋದ್ಯಮಿಗಳ ಪಾಡು ಹೇಳತೀರದು. ಈ ಭಾಗದ ರಸ್ತೆಗಳಲ್ಲಿ ಗುಂಡಿ ಬಿದ್ದಿವೆ. ಮಳೆ ಬಂದಾಗ ನೀರು ಕಾರ್ಖಾನೆಗಳಿಗೆ ನುಗ್ಗಿ ಮಾಲೀಕರು ಕೋಟ್ಯಂತರ ರೂಪಾಯಿ ನಷ್ಟ ಅನುಭವಿಸಿದ ಉದಾಹರಣೆಗಳೂ ಇವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಈ ಭಾಗದಲ್ಲಿ ಕಸದ ಸಮಸ್ಯೆ, ಬೀದಿದೀಪಗಳ ಸಮಸ್ಯೆ ಹಾಗೂ ಕೈಗಾರಿಕೆಗಳಿಗೆ ಮಾರ್ಷಲ್ಗಳ ಕಿರುಕುಳ ತಪ್ಪಿಸಲು ಶೀಘ್ರವೇ ಸಭೆ ಕರೆಯಿರಿ. ಸರಿಯಾಗಿ ಕೆಲಸ ಮಾಡದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸಭೆಯಲ್ಲಿ ದಾಸರಹಳ್ಳಿ ವಲಯ ಪಾಲಿಕೆ ಜಂಟಿ ಆಯುಕ್ತ ನರಸಿಂಹಮೂರ್ತಿ,ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಕಾಶ್, ಕರ್ನಾಟಕ ಸಣ್ಣ ಕೈಗಾರಿಕಾ ಸಂಘಗಳ ಅಧ್ಯಕ್ಷ ಅರಸಪ್ಪ, ಉದ್ಯಮಿಗಳು ಹಾಗೂ ಕೈಗಾರಿಕಾ ಸಂಘದ ಮಲ್ಲೇಶ್ ಗೌಡ, ಮಂಜುನಾಥ್, ಗೋವಿಂದಪ್ಪ, ಆರ್.ಕೆ.ಕುಮಾರ್, ಮುರಳೀಧರ್ ಹಾಗೂ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>:‘ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ₹30 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಒಳಚರಂಡಿ ಕಾಮಗಾರಿ ಪೂರ್ಣವಾಗಿದ್ದು, ರಸ್ತೆಗಳ ಡಾಂಬರೀಕರಣ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು’ ಎಂದು ಶಾಸಕಆರ್.ಮಂಜುನಾಥ್ ತಿಳಿಸಿದರು.</p>.<p>ಪೀಣ್ಯ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ಮೂಲಸೌಕರ್ಯಗಳ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಪೀಣ್ಯ ಕೈಗಾರಿಕಾ ಸಂಘದ ಕಚೇರಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಪೀಣ್ಯ ಕೈಗಾರಿಕಾ ಪ್ರದೇಶವು ಲಕ್ಷಾಂತರ ಜನರಿಗೆ ಉದ್ಯೋಗ ಕಲ್ಪಿಸಿದೆ. ಇಲ್ಲಿನ ಕಂಪನಿಗಳು ಸರ್ಕಾರದ ಬೊಕ್ಕಸಕ್ಕೆ ಪ್ರತಿ ತಿಂಗಳು ಕೋಟಿಗಟ್ಟಲೆ ತೆರಿಗೆ ಪಾವತಿಸುತ್ತಿವೆ. ಆದರೆ, ಇಲ್ಲಿನ ಕೈಗಾರಿಕೋದ್ಯಮಿಗಳ ಪಾಡು ಹೇಳತೀರದು. ಈ ಭಾಗದ ರಸ್ತೆಗಳಲ್ಲಿ ಗುಂಡಿ ಬಿದ್ದಿವೆ. ಮಳೆ ಬಂದಾಗ ನೀರು ಕಾರ್ಖಾನೆಗಳಿಗೆ ನುಗ್ಗಿ ಮಾಲೀಕರು ಕೋಟ್ಯಂತರ ರೂಪಾಯಿ ನಷ್ಟ ಅನುಭವಿಸಿದ ಉದಾಹರಣೆಗಳೂ ಇವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಈ ಭಾಗದಲ್ಲಿ ಕಸದ ಸಮಸ್ಯೆ, ಬೀದಿದೀಪಗಳ ಸಮಸ್ಯೆ ಹಾಗೂ ಕೈಗಾರಿಕೆಗಳಿಗೆ ಮಾರ್ಷಲ್ಗಳ ಕಿರುಕುಳ ತಪ್ಪಿಸಲು ಶೀಘ್ರವೇ ಸಭೆ ಕರೆಯಿರಿ. ಸರಿಯಾಗಿ ಕೆಲಸ ಮಾಡದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸಭೆಯಲ್ಲಿ ದಾಸರಹಳ್ಳಿ ವಲಯ ಪಾಲಿಕೆ ಜಂಟಿ ಆಯುಕ್ತ ನರಸಿಂಹಮೂರ್ತಿ,ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಕಾಶ್, ಕರ್ನಾಟಕ ಸಣ್ಣ ಕೈಗಾರಿಕಾ ಸಂಘಗಳ ಅಧ್ಯಕ್ಷ ಅರಸಪ್ಪ, ಉದ್ಯಮಿಗಳು ಹಾಗೂ ಕೈಗಾರಿಕಾ ಸಂಘದ ಮಲ್ಲೇಶ್ ಗೌಡ, ಮಂಜುನಾಥ್, ಗೋವಿಂದಪ್ಪ, ಆರ್.ಕೆ.ಕುಮಾರ್, ಮುರಳೀಧರ್ ಹಾಗೂ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>