<p><strong>ಹೆಸರಘಟ್ಟ: </strong> ‘ಯಲಹಂಕ ಕ್ಷೇತ್ರದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿಯಬೇಕಾದರೆ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಜನ ಸಿದ್ಧರಿದ್ದಾರೆ. ಈ ಅವಕಾಶವನ್ನು ಬಳಸಿಕೊಳ್ಳಬೇಕು’ ಎಂದು ರಾಜ್ಯಸಭಾ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಹೇಳಿದರು.</p>.<p>ಹೆಸರಘಟ್ಟದಲ್ಲಿ ಭಾನುವಾರ ನಡೆದ ‘ಜನಮಾನಸ’ ಸಮಾವೇಶದಲ್ಲಿ ಮಾತನಾಡಿದ ಅವರು, ‘ಮುಂದಿನ ದಿನಗಳಲ್ಲಿ ಯಲಹಂಕ ಕ್ಷೇತ್ರದಲ್ಲಿ ಒಬ್ಬ ಬ್ರಹ್ಮ ರಾಕ್ಷಸನ ವಧೆ ಮಾಡಬೇಕಿದೆ. ದೊಡ್ಡ ತಿಮಿಂಗಿಲವನ್ನು ಮಣಿಸಬೇಕು. ಯುದ್ಧ ಮಾಡಬೇಕೆಂದರೆ ಸೈನ್ಯ ಸದೃಢವಾಗಿರಬೇಕು. ಈ ನಿಟ್ಟಿನಲ್ಲಿ ಶಾಸಕರು ಮಾಡಿರುವ ಅವ್ಯವಹಾರ, ಅನ್ಯಾಯ, ಭೂ ಹಗರಣಗಳನ್ನು ಬಯಲು ಮಾಡಬೇಕು’ ಎಂದು ಶಾಸಕ ಎಸ್ ಆರ್ ವಿಶ್ವನಾಥ್ ವಿರುದ್ಧ ಹರಿಹಾಯ್ದರು.</p>.<p>ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಯಾರಿಗೂ ಅಂಜದೆ, ಎದೆಗುಂದದೆ ಸ್ವಾಭಿಮಾನದಿಂದ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಈ ಭಾಗದಲ್ಲಿ ಹೊಂದಾಣಿಕೆ ರಾಜಕೀಯವನ್ನು ಇನ್ನು ಮುಂದೆ ಸಹಿಸುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಶಾಸಕರನ್ನು ಬದಲಾವಣೆ ಮಾಡಲು ಈ ಸಮಾವೇಶ ನಾಂದಿಯಾಗಲಿದೆ ಎಂದರು.</p>.<p>ಸಮಾವೇಶದಲ್ಲಿ ಪಕ್ಷದ ವಿವಿಧ ವಿಭಾಗಗಳಿಗೆ ನೇಮಕಗೊಂಡ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ನೀಡಲಾಯಿತು. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹಲವು ಮುಖಂಡರನ್ನು ಕಾಂಗ್ರೆಸ್ಗೆ ಬರಮಾಡಿಕೊಳ್ಳಲಾಯಿತು.</p>.<p>ಕಾರ್ಯಕ್ರಮದಲ್ಲಿ ಯಲಹಂಕ ಕಾಂಗ್ರೆಸ್ ಮುಖಂಡ ಬಿ.ಕೇಶವ ರಾಜಣ್ಣ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದುಲ್ ವಾಜಿದ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಂಜುನಾಥ್ ಅದ್ದೆ, ಶ್ರೀನಿವಾಸ್, ಎಚ್. ಮೂರ್ತಿ , ಯಲಹಂಕ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಪ್ರೇಮಲತಾ ಬಸವರಾಜು, ವೀಣಾ ರಮೇಶ್, ಮುಖಂಡರಾದ ಕೇಶವಮೂರ್ತಿ, ಲಕ್ಷ್ಮಣಮೂರ್ತಿ ಮತ್ತಿತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಸರಘಟ್ಟ: </strong> ‘ಯಲಹಂಕ ಕ್ಷೇತ್ರದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿಯಬೇಕಾದರೆ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಬೇಕು. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಜನ ಸಿದ್ಧರಿದ್ದಾರೆ. ಈ ಅವಕಾಶವನ್ನು ಬಳಸಿಕೊಳ್ಳಬೇಕು’ ಎಂದು ರಾಜ್ಯಸಭಾ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಹೇಳಿದರು.</p>.<p>ಹೆಸರಘಟ್ಟದಲ್ಲಿ ಭಾನುವಾರ ನಡೆದ ‘ಜನಮಾನಸ’ ಸಮಾವೇಶದಲ್ಲಿ ಮಾತನಾಡಿದ ಅವರು, ‘ಮುಂದಿನ ದಿನಗಳಲ್ಲಿ ಯಲಹಂಕ ಕ್ಷೇತ್ರದಲ್ಲಿ ಒಬ್ಬ ಬ್ರಹ್ಮ ರಾಕ್ಷಸನ ವಧೆ ಮಾಡಬೇಕಿದೆ. ದೊಡ್ಡ ತಿಮಿಂಗಿಲವನ್ನು ಮಣಿಸಬೇಕು. ಯುದ್ಧ ಮಾಡಬೇಕೆಂದರೆ ಸೈನ್ಯ ಸದೃಢವಾಗಿರಬೇಕು. ಈ ನಿಟ್ಟಿನಲ್ಲಿ ಶಾಸಕರು ಮಾಡಿರುವ ಅವ್ಯವಹಾರ, ಅನ್ಯಾಯ, ಭೂ ಹಗರಣಗಳನ್ನು ಬಯಲು ಮಾಡಬೇಕು’ ಎಂದು ಶಾಸಕ ಎಸ್ ಆರ್ ವಿಶ್ವನಾಥ್ ವಿರುದ್ಧ ಹರಿಹಾಯ್ದರು.</p>.<p>ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಯಾರಿಗೂ ಅಂಜದೆ, ಎದೆಗುಂದದೆ ಸ್ವಾಭಿಮಾನದಿಂದ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಈ ಭಾಗದಲ್ಲಿ ಹೊಂದಾಣಿಕೆ ರಾಜಕೀಯವನ್ನು ಇನ್ನು ಮುಂದೆ ಸಹಿಸುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಶಾಸಕರನ್ನು ಬದಲಾವಣೆ ಮಾಡಲು ಈ ಸಮಾವೇಶ ನಾಂದಿಯಾಗಲಿದೆ ಎಂದರು.</p>.<p>ಸಮಾವೇಶದಲ್ಲಿ ಪಕ್ಷದ ವಿವಿಧ ವಿಭಾಗಗಳಿಗೆ ನೇಮಕಗೊಂಡ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ನೀಡಲಾಯಿತು. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹಲವು ಮುಖಂಡರನ್ನು ಕಾಂಗ್ರೆಸ್ಗೆ ಬರಮಾಡಿಕೊಳ್ಳಲಾಯಿತು.</p>.<p>ಕಾರ್ಯಕ್ರಮದಲ್ಲಿ ಯಲಹಂಕ ಕಾಂಗ್ರೆಸ್ ಮುಖಂಡ ಬಿ.ಕೇಶವ ರಾಜಣ್ಣ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದುಲ್ ವಾಜಿದ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಂಜುನಾಥ್ ಅದ್ದೆ, ಶ್ರೀನಿವಾಸ್, ಎಚ್. ಮೂರ್ತಿ , ಯಲಹಂಕ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಪ್ರೇಮಲತಾ ಬಸವರಾಜು, ವೀಣಾ ರಮೇಶ್, ಮುಖಂಡರಾದ ಕೇಶವಮೂರ್ತಿ, ಲಕ್ಷ್ಮಣಮೂರ್ತಿ ಮತ್ತಿತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>