ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಲಹಂಕದಲ್ಲಿ ನನ್ನನ್ನು ರಾಜಕೀಯವಾಗಿ ಸೋಲಿಸಲು ಆಗುವುದಿಲ್ಲ ಎಂಬ ಕಾರಣಕ್ಕೆ ಎಂ.ಎನ್.ಗೋಪಾಲಕೃಷ್ಣ ಈ ಪ್ರಯತ್ನ ಮಾಡಿದ್ದಾನೆ. ಕುಳ್ಳ ದೇವರಾಜ್ ಅಪರಾಧಿ ಹಿನ್ನೆಲೆಯ ವ್ಯಕ್ತಿ. ಆತನನ್ನು ಬಳಸಿಕೊಂಡು ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನನ್ನ ಕೊಲೆಗೆ ಸಂಚು ರೂಪಿಸಿದ್ದರು’ ಎಂದು ಆರೋಪಿಸಿದರು.