‘ಗಾರ್ವೆಬಾವಿಪಾಳ್ಯದ ನಿವಾಸಿ ಸಾಗರ್ (19), ಬೇಗೂರಿನ ಶ್ರೀಧರ್ (20) ಹಾಗೂ ನವೀನ್ ಅಲಿಯಾಸ್ ಕಾಳಪ್ಪ (22) ಬಂಧಿತರು. ಬುಧವಾರ (ಆ. 11) ತಡರಾತ್ರಿ ಸತೀಶ್ ರೆಡ್ಡಿ ಅವರ ಮನೆ ಆವರಣಕ್ಕೆ ನುಗ್ಗಿದ್ದ ಆರೋಪಿಗಳು, ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಸುಳಿವು ಪತ್ತೆ ಮಾಡಿ ಶುಕ್ರವಾರ ಸಂಜೆ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದರು.