<p><strong>ಹೆಸರಘಟ್ಟ: </strong>ಹೆಸರಘಟ್ಟ ಹೋಬಳಿ ವ್ಯಾಪ್ತಿಯಲ್ಲಿ ₹28 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಹಲವು ಅಭಿವೃದ್ಧಿ ಸೌಲಭ್ಯಗಳನ್ನು ಶಾಸಕ ಎಸ್.ಆರ್.ವಿಶ್ವನಾಥ್ ಅವರು ಜನರ ಬಳಕೆಗೆ ಮುಕ್ತಗೊಳಿಸಿದರು.</p>.<p>ಹೆಸರಘಟ್ಟ ಗ್ರಾಮದ ವಾರ್ಡ್ 2, 3, 8 ಮತ್ತು 9 ಹಾಗೂ ಕೊಡಗಿ ತಿರುಮಳಾಪುರ, ಹುರಳಿಚಿಕ್ಕನಹಳ್ಳಿ ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣವಾಗಿವೆ.</p>.<p>ಬ್ಯಾಲಕೆರೆ ಹಾಗೂ ಗುಣಿ ಅಗ್ರಹಾರ ಗ್ರಾಮಗಳಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ವಿಶ್ವನಾಥ್, ‘ಹೆಸರಘಟ್ಟ ಭಾಗದಿಂದ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಆಡಿರುವ ಅನೇಕ ಕಬಡ್ಡಿ ಕ್ರೀಡಾಪಟುಗಳಿದ್ದಾರೆ. ಅವರಿಗೆ ಕ್ರೀಡಾಂಗಣದ ಕೊರತೆ ಇತ್ತು. ಈ ಕಾರಣದಿಂದ ₹2.50 ಕೋಟಿ ವೆಚ್ಚದಲ್ಲಿ ಕಬಡ್ಡಿ ಕೋರ್ಟ್ ನಿರ್ಮಿಸಲಾಗಿದೆ’ ಎಂದರು.</p>.<p>ಇದೇ ಸಂದರ್ಭದಲ್ಲಿ ಅಂಗವಿಕಲರಿಗೆ ಸಲಕರಣೆಗಳನ್ನು ವಿತರಿಸಲಾಯಿತು.</p>.<p><strong>ಸೇರ್ಪಡೆ:</strong> ಮುಖಂಡರಾದ ಮಂಜುನಾಥ್, ಕೆಂಪರಾಜು, ಗಂಗಾಧರ್, ವಸಂತ್, ನಾಗೇಶ್ ಸೇರಿದಂತೆ 100ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಈ ಸಂದರ್ಭದಲ್ಲಿ ಸೇರ್ಪಡೆಯಾದರು.</p>.<p>ಬಿಜೆಪಿ ಮುಖಂಡರಾದ ಅಲೋಕ್ ವಿಶ್ವನಾಥ್, ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ಸಿ.ವೆಂಕಟೇಶ್, ಪಿ.ಕೆ.ರಾಜಣ್ಣ, ಎಚ್.ಸಿ.ರಾಜೇಶ್, ಕುಂಬಾರಹಳ್ಳಿ ಶ್ರೀನಿವಾಸಯ್ಯ, ಎಸ್.ಜಿ.ನರಸಿಂಹಮೂರ್ತಿ, ಅದ್ದೆ ವಿಶ್ವನಾಥಪುರ ಮಂಜುನಾಥ್, ಎಸ್.ಜಿ. ಪ್ರಶಾಂತ್ರೆಡ್ಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಸರಘಟ್ಟ: </strong>ಹೆಸರಘಟ್ಟ ಹೋಬಳಿ ವ್ಯಾಪ್ತಿಯಲ್ಲಿ ₹28 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಹಲವು ಅಭಿವೃದ್ಧಿ ಸೌಲಭ್ಯಗಳನ್ನು ಶಾಸಕ ಎಸ್.ಆರ್.ವಿಶ್ವನಾಥ್ ಅವರು ಜನರ ಬಳಕೆಗೆ ಮುಕ್ತಗೊಳಿಸಿದರು.</p>.<p>ಹೆಸರಘಟ್ಟ ಗ್ರಾಮದ ವಾರ್ಡ್ 2, 3, 8 ಮತ್ತು 9 ಹಾಗೂ ಕೊಡಗಿ ತಿರುಮಳಾಪುರ, ಹುರಳಿಚಿಕ್ಕನಹಳ್ಳಿ ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣವಾಗಿವೆ.</p>.<p>ಬ್ಯಾಲಕೆರೆ ಹಾಗೂ ಗುಣಿ ಅಗ್ರಹಾರ ಗ್ರಾಮಗಳಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ವಿಶ್ವನಾಥ್, ‘ಹೆಸರಘಟ್ಟ ಭಾಗದಿಂದ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಆಡಿರುವ ಅನೇಕ ಕಬಡ್ಡಿ ಕ್ರೀಡಾಪಟುಗಳಿದ್ದಾರೆ. ಅವರಿಗೆ ಕ್ರೀಡಾಂಗಣದ ಕೊರತೆ ಇತ್ತು. ಈ ಕಾರಣದಿಂದ ₹2.50 ಕೋಟಿ ವೆಚ್ಚದಲ್ಲಿ ಕಬಡ್ಡಿ ಕೋರ್ಟ್ ನಿರ್ಮಿಸಲಾಗಿದೆ’ ಎಂದರು.</p>.<p>ಇದೇ ಸಂದರ್ಭದಲ್ಲಿ ಅಂಗವಿಕಲರಿಗೆ ಸಲಕರಣೆಗಳನ್ನು ವಿತರಿಸಲಾಯಿತು.</p>.<p><strong>ಸೇರ್ಪಡೆ:</strong> ಮುಖಂಡರಾದ ಮಂಜುನಾಥ್, ಕೆಂಪರಾಜು, ಗಂಗಾಧರ್, ವಸಂತ್, ನಾಗೇಶ್ ಸೇರಿದಂತೆ 100ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಈ ಸಂದರ್ಭದಲ್ಲಿ ಸೇರ್ಪಡೆಯಾದರು.</p>.<p>ಬಿಜೆಪಿ ಮುಖಂಡರಾದ ಅಲೋಕ್ ವಿಶ್ವನಾಥ್, ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ಸಿ.ವೆಂಕಟೇಶ್, ಪಿ.ಕೆ.ರಾಜಣ್ಣ, ಎಚ್.ಸಿ.ರಾಜೇಶ್, ಕುಂಬಾರಹಳ್ಳಿ ಶ್ರೀನಿವಾಸಯ್ಯ, ಎಸ್.ಜಿ.ನರಸಿಂಹಮೂರ್ತಿ, ಅದ್ದೆ ವಿಶ್ವನಾಥಪುರ ಮಂಜುನಾಥ್, ಎಸ್.ಜಿ. ಪ್ರಶಾಂತ್ರೆಡ್ಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>