<p><strong>ರಾಜರಾಜೇಶ್ವರಿನಗರ</strong>: ‘ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಯನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರ್ಪಡೆ ಮಾಡಲಾಗಿದ್ದು, ಇದರಿಂದ ಮತ್ತಷ್ಟು ಅಭಿವೃದ್ದಿ ಕಾಣಲು ಸಾಧ್ಯವಾಗಲಿದೆ’ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಅವರು ಹೇಳಿದರು.</p>.<p>ಕೊಡಿಗೇಹಳ್ಳಿಯಲ್ಲಿ ಗ್ರಾಮ ಪಂಚಾಯಿತಿಯಿಂದ ಹಮ್ಮಿಕೊಂಡಿದ್ದ ಮನೆಮನೆಯಿಂದ ಕಸ ಸಂಗ್ರಹಿಸುವ ವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. </p>.<p>ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಭಾಗೀರಥಿ, ‘ಗ್ರಾಮ ಪಂಚಾಯಿತಿ ಮತ್ತು ಸ್ತ್ರೀ ಶಕ್ತಿ ಸಂಘಗಳ ಜೊತೆ ಒಡಂಬಡಿಕೆ ಮಾಡಿಕೊಂಡು, ನಾಲ್ಕು ಟ್ರ್ಯಾಕ್ಟರ್, ಐದು ಆಟೋ ಮೂಲಕ ಪ್ರತಿನಿತ್ಯ ಕಸ ಸಂಗ್ರಹಿಸಲಾಗುವದು’ ಎಂದರು.</p>.<p>ಇದೇ ವೇಳೆ ಹಸಿ ಮತ್ತು ಒಣಕಸ ಸಂಗ್ರಹಿಸಲು 2500 ಮನೆಗಳಿಗೆ ಉಚಿತ ಬಕೆಟ್ಗಳನ್ನು ವಿತರಿಸಲಾಯಿತು. </p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿನೋದ ನರಸಿಂಹಮೂರ್ತಿ, ಉಪಾಧ್ಯಕ್ಷೆ ಭಾಗ್ಯವತಿ ಮುನಿಯಪ್ಪ, ಮಾಜಿ ಅಧ್ಯಕ್ಷರಾದ ಎನ್.ನಂಜುಂಡೇಶ್, ದೇವರಾಜು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರೇವಣ್ಣಸಿದ್ದಯ್ಯ ಸದಸ್ಯರಾದ ನಾಗರಾಜು, ಚಂದ್ರು, ಸಾವಿತ್ರಿ, ಕೋಮಲ ಸೋಮಶೇಖರ್, ಗಂಗರಾಜಮ್ಮ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ</strong>: ‘ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಯನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರ್ಪಡೆ ಮಾಡಲಾಗಿದ್ದು, ಇದರಿಂದ ಮತ್ತಷ್ಟು ಅಭಿವೃದ್ದಿ ಕಾಣಲು ಸಾಧ್ಯವಾಗಲಿದೆ’ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಅವರು ಹೇಳಿದರು.</p>.<p>ಕೊಡಿಗೇಹಳ್ಳಿಯಲ್ಲಿ ಗ್ರಾಮ ಪಂಚಾಯಿತಿಯಿಂದ ಹಮ್ಮಿಕೊಂಡಿದ್ದ ಮನೆಮನೆಯಿಂದ ಕಸ ಸಂಗ್ರಹಿಸುವ ವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. </p>.<p>ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಭಾಗೀರಥಿ, ‘ಗ್ರಾಮ ಪಂಚಾಯಿತಿ ಮತ್ತು ಸ್ತ್ರೀ ಶಕ್ತಿ ಸಂಘಗಳ ಜೊತೆ ಒಡಂಬಡಿಕೆ ಮಾಡಿಕೊಂಡು, ನಾಲ್ಕು ಟ್ರ್ಯಾಕ್ಟರ್, ಐದು ಆಟೋ ಮೂಲಕ ಪ್ರತಿನಿತ್ಯ ಕಸ ಸಂಗ್ರಹಿಸಲಾಗುವದು’ ಎಂದರು.</p>.<p>ಇದೇ ವೇಳೆ ಹಸಿ ಮತ್ತು ಒಣಕಸ ಸಂಗ್ರಹಿಸಲು 2500 ಮನೆಗಳಿಗೆ ಉಚಿತ ಬಕೆಟ್ಗಳನ್ನು ವಿತರಿಸಲಾಯಿತು. </p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿನೋದ ನರಸಿಂಹಮೂರ್ತಿ, ಉಪಾಧ್ಯಕ್ಷೆ ಭಾಗ್ಯವತಿ ಮುನಿಯಪ್ಪ, ಮಾಜಿ ಅಧ್ಯಕ್ಷರಾದ ಎನ್.ನಂಜುಂಡೇಶ್, ದೇವರಾಜು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರೇವಣ್ಣಸಿದ್ದಯ್ಯ ಸದಸ್ಯರಾದ ನಾಗರಾಜು, ಚಂದ್ರು, ಸಾವಿತ್ರಿ, ಕೋಮಲ ಸೋಮಶೇಖರ್, ಗಂಗರಾಜಮ್ಮ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>