ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಸೋಮವಾರ ಬರೆದುಕೊಂಡಿರುವ ಅವರು, ‘ಕೆಪಿಎಸ್ಸಿ ಕಾರ್ಯವೈಖರಿಯಿಂದ ನೊಂದಿರುವ 150ಕ್ಕೂ ಹೆಚ್ಚು ಯುವಕರು ಮತ್ತು ಯುವತಿಯರು ಸೋಮವಾರ ಬೆಳಿಗ್ಗೆ ನನ್ನ ಮನೆಗೆ ಬಂದಿದ್ದರು. ಅವರ ಪರಿಸ್ಥಿತಿ ವಿವರಿಸಿ ಈಗಾಗಲೇ ಮುಖ್ಯಮಂತ್ರಿಗೆ ಎರಡು ಪತ್ರ ಬರೆದಿದ್ದೇನೆ. ಆಯೋಗದ ಅಧ್ಯಕ್ಷ, ಕಾರ್ಯದರ್ಶಿಯನ್ನು ಭೇಟಿ ಮಾಡಿದ್ದೇನೆ. ಮುಖ್ಯಮಂತ್ರಿಯ ಕಾರ್ಯದರ್ಶಿಗೂ ವಿಚಾರ ತಿಳಿಸಿದ್ದೇನೆ. ಸಚಿವರಾದ ಕೆ.ಜೆ. ಜಾರ್ಜ್ ಅವರಿಗೂ ವಿವರಿಸಿದ್ದೇನೆ’ ಎಂದಿದ್ದಾರೆ.