ಬೆಂಗಳೂರು: ‘ನಗರದಲ್ಲಿ ಮೆಟ್ರೊ ರೈಲು ಸಂಚಾರ ಸಮಯ ವಿಸ್ತರಿಸಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ. ಇದು ನ್ಯಾಯಯುತವಾದ ಕೂಗು. ರಾತ್ರಿ 8ರ ನಂತರವೂ ಮೆಟ್ರೊ ರೈಲು ಸಂಚಾರ ಸಮಯ ವಿಸ್ತರಿಸಬೇಕು‘ ಎಂದು ಒತ್ತಾಯಿಸಿ ಶಾಸಕ ಎಸ್. ಸುರೇಶ್ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.