ಬೆಂಗಳೂರು: ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡುವ ಆದೇಶಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಹಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ವಿಷಯ ಖಚಿತಪಡಿಸಿರುವ ವಿಶ್ವನಾಥ್ ಅವರು, ‘ನಿಗಮ ಅಥವಾ ಮಂಡಳಿಯಲ್ಲಿ ಕೆಲಸ ಮಾಡುವ ಆಸಕ್ತಿ ಇರಲಿಲ್ಲ. ಸಾಹೇಬ್ರ ಜತೆಯಲ್ಲಿ ಇದ್ದು ಕೆಲಸ ಮಾಡುವ ಆಸಕ್ತಿ ವ್ಯಕ್ತಪಡಿಸಿದೆ. ಅದಕ್ಕೆ ಒಪ್ಪಿಕೊಂಡು ರಾಜಕೀಯ ಕಾರ್ಯದರ್ಶಿ ಹುದ್ದೆಯನ್ನು ನೀಡಿದ್ದಾರೆ’ ಎಂದು ಹೇಳಿದರು.