‘ತೊಡೆಗೆ ಚಾಕು ಹಾಕಿದ್ದರಿಂದ ನರ ತುಂಡಾಗಿದೆ. ರಕ್ತಸ್ರಾವ ನಿಲ್ಲದ ಕಾರಣ ಆ ವ್ಯಕ್ತಿ ಸಾವನ್ನಪ್ಪಿದ್ದಾನೆ. ಆದರೆ, ಬಿಜೆಪಿಯವರು ಶವ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಯಾವುದಾದರೂ ಗಲಾಟೆಯಲ್ಲಿ ರಾಜಕಾರಣಿ ಸತ್ತಿದ್ದಾರಾ’ ಎಂದು ಪ್ರಶ್ನಿಸಿರುವ ಜಮೀರ್, ‘ಜನರಿಂದ ಆಯ್ಕೆಯಾದ ಸರ್ಕಾರದಲ್ಲಿ ಗಲಭೆ ಇಲ್ಲ. ತಮಿಳುನಾಡಿನಲ್ಲಿ ಹಿಜಾಬ್ ಗಲಾಟೆ ಇಲ್ಲ. ಆದರೆ, ಇಲ್ಲಿ ರಾಜಕೀಯ ಲಾಭಕ್ಕಾಗಿ ಗಲಭೆ ಸೃಷ್ಟಿಸುತ್ತಿದ್ದಾರೆ’ ಎಂದು ದೂರಿದ್ದಾರೆ.