ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಣಿ ಅಪಘಾತ: ಪೊಲೀಸ್‌ ವಿಚಾರಣೆಗೆ ಹಾಜರಾದ ಶಾಸಕ ಹ್ಯಾರಿಸ್‌ ಮಗ ಮೊಹ್ಮದ್ ನಲಪಾಡ್‌

Last Updated 12 ಫೆಬ್ರವರಿ 2020, 11:46 IST
ಅಕ್ಷರ ಗಾತ್ರ

ಬೆಂಗಳೂರು: ಮೇಖ್ರಿ ವೃತ್ತದ ಕಳೆಸೇತುವೆ ಬಳಿ ಭಾನುವಾರ (ಫೆ. 9) ಮಧ್ಯಾಹ್ನ ಸಂಭವಿಸಿದ್ದ ಸರಣಿ ಅಪಘಾತಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಶಾಸಕ ಎನ್‌.ಎ. ಹ್ಯಾರಿಸ್‌ ಮಗ ಮೊಹ್ಮದ್‌ ನಲಪಾಡ್‌ ಬುಧವಾರವಿಚಾರಣೆಗೆ ಹಾಜರಾದರು.

ಪ್ರಕರಣದ ತನಿಖಾಧಿಕಾರಿ ಬಿ.ಪಿ. ನಾಗರಾಜು ಅವರು ನಲಪಾಡ್‌ ಅವರ ಹೇಳಿಕೆಯನ್ನು ದಾಖಲಿಕೊಂಡರು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನಲಪಾಡ್‌ ಅವರಿಗೆ ಮಂಗಳವಾರ ನೋಟಿಸ್‌ ನೀಡಿದ್ದರು.

ಸಂಚಾರ ವಿಭಾಗದ ಜಂಟಿ ಕಮಿಷನರ್‌ ಬಿ.ಆರ್‌. ರವಿಕಾಂತೇಗೌಡ ಮಾತನಾಡಿ, ’ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ನಲಪಾಡ್‌ ಅವರನ್ನು ಬಂಧಿಸಿ, ಬಾಂಡ್‌ ಬರೆಸಿಕೊಂಡು ಠಾಣಾ ಜಾಮೀನು (ಸ್ಟೇಷನ್‌ ಬೇಲ್‌) ನೀಡಿದ್ದೇವೆ’ ಎಂದು ತಿಳಿಸಿದರು.

‘ನಲಪಾಡ್‌ ಕಾರು ಚಲಾಯಿಸಿಲ್ಲ. ಬೇರೊಬ್ಬ ವ್ಯಕ್ತಿ ಕಾರು ಚಲಾಯಿಸುತ್ತಿದ್ದರು. ಅವರ ವಿರುದ್ಧ ಷಡ್ಯಂತ್ರರೂಪಿಸಲಾಗಿದೆ’ ಎಂದು ನಲಪಾಡ್‌ ಪರ ವಕೀಲ ಉಸ್ಮಾನ್‌ ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT