ಕಾಂಗ್ರೆಸ್ ಎಲ್ಲ ಸಂದರ್ಭದಲ್ಲೂ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದೆ. ಆದರೆ, ಜೆಡಿಎಸ್ ಜತೆ ವಿಷಯಾಧಾರಿತವಾಗಿ ಹೊಂದಾಣಿಕೆ ಮಾಡಿಕೊಂಡಿದೆ. ಕೆಲವೆಡೆ ವಿರೋಧವನ್ನೂ ಮಾಡಿದೆ. ಕೆಲವೇ ದಿನಗಳ ಹಿಂದೆ ಜೆಡಿಎಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ನಾಯಕರೇ ಈಗ ಮೈತ್ರಿಗಾಗಿ ಮುಂದೆ ಬಂದಿದ್ದಾರೆ. ಬಿಜೆಪಿಗೆ ಈ ಪರಿಸ್ಥಿತಿ ಬರಬಾರದಿತ್ತು ಎಂದು ಹೇಳಿದರು.