<p><strong>ಬೆಂಗಳೂರು</strong>: ‘ಸ್ವಾರ್ಥ ಮನೋಭಾವ ತೊರೆದರೆ ಬಲಿಜ ಮತ್ತು ಬಣಜಿಗ ಸಮುದಾಯಗಳು ಒಂದಾಗಬಹುದು’ ಎಂದು ವಿಧಾನ ಪರಿಷತ್ ಸದಸ್ಯ ಎಂ.ಆರ್. ಸೀತಾರಾಂ ಹೇಳಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳವಾರ ಆಯೋಜಿಸಿದ್ದ ಯೋಗಿನಾರೇಯಣ ಯತೀಂದ್ರರ ಜಯಂತಿ (ಕೈವಾರ ತಾತಯ್ಯ) ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಬೇಕು. ಸಮುದಾಯದಲ್ಲಿ ಬಡವರು, ಶ್ರೀಮಂತರು ಇರುವುದು ಸಹಜ. ಸಣ್ಣ ಸಮುದಾಯಗಳನ್ನು ಜತೆಯಲ್ಲಿ ಕೊಂಡೊಯ್ಯಬೇಕು. ಉಳ್ಳವರು ಇಲ್ಲದವರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಬೇಕು’ ಎಂದು ಕರೆ ನೀಡಿದರು.</p>.<p>‘ಕೋಲಾರ, ಚಿಕ್ಕಬಳ್ಳಾಪುರದ ಜನರಿಗೆ ತಾತಯ್ಯ ಅವರ ಮೇಲೆ ಅಪಾರ ನಂಬಿಕೆ. ತಾತಯ್ಯ ಎಲ್ಲರಿಗೂ ಆದರ್ಶ ಪ್ರಾಯರು. ಅವರ ತತ್ವ ಮತ್ತು ಆದರ್ಶಗಳನ್ನು ಪಾಲಿಸಬೇಕು. ಮುಂದಿನ ವರ್ಷ ತಾತಯ್ಯ ಅವರ 301ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸೋಣ’ ಎಂದರು.</p>.<p>ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎನ್.ಸಂಪಂಗಿ ಮಾತನಾಡಿ, ‘ಬಲಿಜ ಸಮುದಾಯ ರಾಜಕೀಯವಾಗಿ ಬೆಳೆಯಬೇಕು. ಪರಸ್ಪರ ಭಿನ್ನಾಭಿಪ್ರಾಯ ಮರೆತು ಸಮುದಾಯದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ‘ ಎಂದರು.</p>.<p>ಉಪನ್ಯಾಸ ನೀಡಿದ ಕೈವಾರದ ಬಾಲಕೃಷ್ಣ ಭಾಗವತರ್, ‘ದ್ವೇಷ, ಅಸೂಯೆಯಿಂದ ಏನೂ ಸಾಧಿಸಲು ಆಗುವುದಿಲ್ಲ. ಯಾವುದೇ ತಾರತಮ್ಯ ಮಾಡದೇ ಎಲ್ಲರನ್ನೂ ನಮ್ಮವರು ಎಂದು ಅಪ್ಪಿಕೊಂಡು ಸಾಗಬೇಕು. ಸಮಾಜಕ್ಕೆ ಕೊಡುಗೆ ನೀಡಿದವರನ್ನು ಸ್ಮರಿಸಿಕೊಳ್ಳಬೇಕು’ ಎಂದು ನುಡಿದರು.</p>.<p>ಸಂಸದ ಪಿ.ಸಿ.ಮೋಹನ್, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಪದ್ಮಾವತಿ, ವಕೀಲ ಅಶ್ವಥ್ ನಾರಾಯಣ, ಸಮುದಾಯದ ಮಮತಾ ದೇವರಾಜ, ರಾಮಲಿಂಗಪ್ಪ, ಶ್ರೀರಾಮುಲು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಬಿ.ಎಸ್.ಮಂಜುನಾಥಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸ್ವಾರ್ಥ ಮನೋಭಾವ ತೊರೆದರೆ ಬಲಿಜ ಮತ್ತು ಬಣಜಿಗ ಸಮುದಾಯಗಳು ಒಂದಾಗಬಹುದು’ ಎಂದು ವಿಧಾನ ಪರಿಷತ್ ಸದಸ್ಯ ಎಂ.ಆರ್. ಸೀತಾರಾಂ ಹೇಳಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳವಾರ ಆಯೋಜಿಸಿದ್ದ ಯೋಗಿನಾರೇಯಣ ಯತೀಂದ್ರರ ಜಯಂತಿ (ಕೈವಾರ ತಾತಯ್ಯ) ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಬೇಕು. ಸಮುದಾಯದಲ್ಲಿ ಬಡವರು, ಶ್ರೀಮಂತರು ಇರುವುದು ಸಹಜ. ಸಣ್ಣ ಸಮುದಾಯಗಳನ್ನು ಜತೆಯಲ್ಲಿ ಕೊಂಡೊಯ್ಯಬೇಕು. ಉಳ್ಳವರು ಇಲ್ಲದವರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಬೇಕು’ ಎಂದು ಕರೆ ನೀಡಿದರು.</p>.<p>‘ಕೋಲಾರ, ಚಿಕ್ಕಬಳ್ಳಾಪುರದ ಜನರಿಗೆ ತಾತಯ್ಯ ಅವರ ಮೇಲೆ ಅಪಾರ ನಂಬಿಕೆ. ತಾತಯ್ಯ ಎಲ್ಲರಿಗೂ ಆದರ್ಶ ಪ್ರಾಯರು. ಅವರ ತತ್ವ ಮತ್ತು ಆದರ್ಶಗಳನ್ನು ಪಾಲಿಸಬೇಕು. ಮುಂದಿನ ವರ್ಷ ತಾತಯ್ಯ ಅವರ 301ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸೋಣ’ ಎಂದರು.</p>.<p>ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎನ್.ಸಂಪಂಗಿ ಮಾತನಾಡಿ, ‘ಬಲಿಜ ಸಮುದಾಯ ರಾಜಕೀಯವಾಗಿ ಬೆಳೆಯಬೇಕು. ಪರಸ್ಪರ ಭಿನ್ನಾಭಿಪ್ರಾಯ ಮರೆತು ಸಮುದಾಯದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ‘ ಎಂದರು.</p>.<p>ಉಪನ್ಯಾಸ ನೀಡಿದ ಕೈವಾರದ ಬಾಲಕೃಷ್ಣ ಭಾಗವತರ್, ‘ದ್ವೇಷ, ಅಸೂಯೆಯಿಂದ ಏನೂ ಸಾಧಿಸಲು ಆಗುವುದಿಲ್ಲ. ಯಾವುದೇ ತಾರತಮ್ಯ ಮಾಡದೇ ಎಲ್ಲರನ್ನೂ ನಮ್ಮವರು ಎಂದು ಅಪ್ಪಿಕೊಂಡು ಸಾಗಬೇಕು. ಸಮಾಜಕ್ಕೆ ಕೊಡುಗೆ ನೀಡಿದವರನ್ನು ಸ್ಮರಿಸಿಕೊಳ್ಳಬೇಕು’ ಎಂದು ನುಡಿದರು.</p>.<p>ಸಂಸದ ಪಿ.ಸಿ.ಮೋಹನ್, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಪದ್ಮಾವತಿ, ವಕೀಲ ಅಶ್ವಥ್ ನಾರಾಯಣ, ಸಮುದಾಯದ ಮಮತಾ ದೇವರಾಜ, ರಾಮಲಿಂಗಪ್ಪ, ಶ್ರೀರಾಮುಲು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಬಿ.ಎಸ್.ಮಂಜುನಾಥಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>