<p><strong>ಬೆಂಗಳೂರು</strong>: ನಗರದ ಮಳಿಗೆಗಳಲ್ಲಿ ಮೊಬೈಲ್ ಹಾಗೂ ಲ್ಯಾಪ್ಟಾಪ್ ಕಳವು ಮಾಡಿಕೊಂಡು ದೆಹಲಿಗೆ ರೈಲಿನಲ್ಲಿ ಹೊರಟಿದ್ದ ಆರೋಪಿಗಳು ಹುಬ್ಬಳ್ಳಿಯಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.</p>.<p>‘ಕಾಡುಗೋಡಿ ದಿಣ್ಣೂರು ನಿವಾಸಿ ಎನ್. ಮಂಜುನಾಥ್ (20) ಹಾಗೂ ಹೂಡಿ ನಿವಾಸಿ ಸೌರವ್ ಕುಮಾರ್ (20) ಬಂಧಿತರು. ಅವರಿಂದ ₹ 5 ಲಕ್ಷ ಮೌಲ್ಯದ 39 ಮೊಬೈಲ್ಗಳು. ಲ್ಯಾಪ್ಟಾಪ್ಗಳು ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಮಹದೇವಪುರ, ವೈಟ್ಫೀಲ್ಡ್, ಹೊಸಕೋಟೆ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿರುವ ಮಳಿಗೆಗಳಲ್ಲಿ ಆರೋಪಿಗಳು ಕೃತ್ಯ ಎಸಗಿದ್ದರು. ರಾತ್ರಿ ವೇಳೆ ಮಳಿಗೆ ಬೀಗ ಮುರಿದು ಒಳ ನುಗ್ಗುತ್ತಿದ್ದರು. ಮೊಬೈಲ್, ಲ್ಯಾಪ್ಟಾಪ್ ಹಾಗೂ ಇತರೆ ವಸ್ತುಗಳನ್ನು ಕಳವು ಮಾಡಿದ್ದರು.’</p>.<p>‘ಕದ್ದ ವಸ್ತುಗಳನ್ನು ಮಾರಾಟ ಮಾಡಲು ಆರೋಪಿಗಳು, ದೆಹಲಿಗೆ ರೈಲಿನಲ್ಲಿ ಹೊರಟಿದ್ದರು. ಈ ಬಗ್ಗೆ ಮಾಹಿತಿ ಕಲೆಹಾಕಿದ್ದ ಮಹದೇವಪುರ ಪೊಲೀಸರ ತಂಡ, ಆರೋಪಿಗಳ ಬಂಧನಕ್ಕೆ ಬಲೆ ಬೀಸಿತ್ತು. ಹುಬ್ಬಳ್ಳಿ ಮೂಲಕ ರೈಲು ಹೊರಡುವುದನ್ನು ತಿಳಿದಿದ್ದ ತಂಡ, ಅಲ್ಲಿಯ ರೈಲು ನಿಲ್ದಾಣ ಪೊಲೀಸರಿಗೆ ಮಾಹಿತಿ ನೀಡಿತ್ತು. ಅವರ ಸಹಾಯದಿಂದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ’ ಎಂದೂ ತಿಳಿಸಿದರು.</p>.<p>'ಆರೋಪಿ ಮಂಜುನಾಥ್, ತನ್ನ ಸ್ನೇಹಿತೆಯಾಗಿದ್ದ ಯುವತಿಯನ್ನೂ ಜೊತೆಗೆ ಕರೆದೊಯ್ಯುತ್ತಿದ್ದ. ಆಕೆಯನ್ನು ರಕ್ಷಿಸಿ ಪೋಷಕರಿಗೆ ಒಪ್ಪಿಸಲಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಮಳಿಗೆಗಳಲ್ಲಿ ಮೊಬೈಲ್ ಹಾಗೂ ಲ್ಯಾಪ್ಟಾಪ್ ಕಳವು ಮಾಡಿಕೊಂಡು ದೆಹಲಿಗೆ ರೈಲಿನಲ್ಲಿ ಹೊರಟಿದ್ದ ಆರೋಪಿಗಳು ಹುಬ್ಬಳ್ಳಿಯಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.</p>.<p>‘ಕಾಡುಗೋಡಿ ದಿಣ್ಣೂರು ನಿವಾಸಿ ಎನ್. ಮಂಜುನಾಥ್ (20) ಹಾಗೂ ಹೂಡಿ ನಿವಾಸಿ ಸೌರವ್ ಕುಮಾರ್ (20) ಬಂಧಿತರು. ಅವರಿಂದ ₹ 5 ಲಕ್ಷ ಮೌಲ್ಯದ 39 ಮೊಬೈಲ್ಗಳು. ಲ್ಯಾಪ್ಟಾಪ್ಗಳು ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಮಹದೇವಪುರ, ವೈಟ್ಫೀಲ್ಡ್, ಹೊಸಕೋಟೆ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿರುವ ಮಳಿಗೆಗಳಲ್ಲಿ ಆರೋಪಿಗಳು ಕೃತ್ಯ ಎಸಗಿದ್ದರು. ರಾತ್ರಿ ವೇಳೆ ಮಳಿಗೆ ಬೀಗ ಮುರಿದು ಒಳ ನುಗ್ಗುತ್ತಿದ್ದರು. ಮೊಬೈಲ್, ಲ್ಯಾಪ್ಟಾಪ್ ಹಾಗೂ ಇತರೆ ವಸ್ತುಗಳನ್ನು ಕಳವು ಮಾಡಿದ್ದರು.’</p>.<p>‘ಕದ್ದ ವಸ್ತುಗಳನ್ನು ಮಾರಾಟ ಮಾಡಲು ಆರೋಪಿಗಳು, ದೆಹಲಿಗೆ ರೈಲಿನಲ್ಲಿ ಹೊರಟಿದ್ದರು. ಈ ಬಗ್ಗೆ ಮಾಹಿತಿ ಕಲೆಹಾಕಿದ್ದ ಮಹದೇವಪುರ ಪೊಲೀಸರ ತಂಡ, ಆರೋಪಿಗಳ ಬಂಧನಕ್ಕೆ ಬಲೆ ಬೀಸಿತ್ತು. ಹುಬ್ಬಳ್ಳಿ ಮೂಲಕ ರೈಲು ಹೊರಡುವುದನ್ನು ತಿಳಿದಿದ್ದ ತಂಡ, ಅಲ್ಲಿಯ ರೈಲು ನಿಲ್ದಾಣ ಪೊಲೀಸರಿಗೆ ಮಾಹಿತಿ ನೀಡಿತ್ತು. ಅವರ ಸಹಾಯದಿಂದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ’ ಎಂದೂ ತಿಳಿಸಿದರು.</p>.<p>'ಆರೋಪಿ ಮಂಜುನಾಥ್, ತನ್ನ ಸ್ನೇಹಿತೆಯಾಗಿದ್ದ ಯುವತಿಯನ್ನೂ ಜೊತೆಗೆ ಕರೆದೊಯ್ಯುತ್ತಿದ್ದ. ಆಕೆಯನ್ನು ರಕ್ಷಿಸಿ ಪೋಷಕರಿಗೆ ಒಪ್ಪಿಸಲಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>