ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸುರಕ್ಷತೆ’ ತಪ್ಪಿದರೆ ಕಠಿಣ ಕಾನೂನು ಕ್ರಮ: ಕಮಿಷನರ್ ಎಚ್ಚರಿಕೆ

ಮೊಬೈಲ್ ಆ್ಯಪ್ ಸೇವೆ ಕಂಪನಿ ಪ್ರತಿನಿಧಿಗಳ ಸಭೆ:
Last Updated 3 ಡಿಸೆಂಬರ್ 2022, 16:19 IST
ಅಕ್ಷರ ಗಾತ್ರ

ಬೆಂಗಳೂರು: ‘ಮೊಬೈಲ್ ಆ್ಯಪ್‌ ಆಧಾರಿತ ಸಾರಿಗೆ, ಸರಕು ಸಾಗಣೆ ಹಾಗೂ ಆಹಾರ ಪೂರೈಕೆ ಮಾಡುವ ಕಂಪನಿಗಳು ಗ್ರಾಹಕರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ನಿಯಮ ಮೀರಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಎಚ್ಚರಿಕೆ ನೀಡಿದರು.

ನಗರದ ಕಮಿಷನರ್ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಕಂಪನಿಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಆ್ಯಪ್ ಮೂಲಕ ರ‍್ಯಾಪಿಡೊ ಬೈಕ್ ಸೇವೆ ಪಡೆದಿದ್ದ ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಆರೋಪದಡಿ ಬೈಕ್ ಸವಾರ ಸೇರಿ ಇಬ್ಬರನ್ನು ಬಂಧಿಸಲಾಗಿತ್ತು. ಈ ಘಟನೆಯಿಂದ ಆ್ಯಪ್ ಆಧಾರಿತ ಸೇವೆ ಪಡೆಯುವವರಲ್ಲಿ ಆತಂಕ ಶುರುವಾಗಿತ್ತು. ಹೀಗಾಗಿ, ಪೊಲೀಸರು ಈ ಸಭೆ ಹಮ್ಮಿಕೊಂಡಿದ್ದರು. ಓಲಾ, ಉಬರ್, ಜೊಮ್ಯಾಟೊ, ಡನ್ಝೊ, ಫ್ಲಿಪ್‌ಕಾರ್ಟ್, ಅಮೆಜಾನ್, ರ‍್ಯಾಪಿಡೊ ಸೇರಿದಂತೆ ವಿವಿಧ ಕಂಪನಿಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

‘ಸಾರ್ವಜನಿಕರ ಸುರಕ್ಷತೆಗೆ ಎಲ್ಲ ಕಂಪನಿಗಳು ಒತ್ತು ನೀಡಬೇಕು. ಮಹಿಳೆ ಮತ್ತು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಂಪನಿಯ ವ್ಯವಸ್ಥೆಯನ್ನು ಜನಸ್ನೇಹಿಯಾಗಿ ರೂಪಿಸಬೇಕು. ಯಾವುದೇ ತುರ್ತು ಸಂದರ್ಭದಲ್ಲೂ ಪರಿಸ್ಥಿತಿಯನ್ನು ಎದುರಿಸಲು ಪೊಲೀಸರು ನಿಮ್ಮ ಜೊತೆಗಿರಲಿದ್ದಾರೆ’ ಎಂದು ಪ್ರತಾಪ್ ರೆಡ್ಡಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT