<p><strong>ಬೆಂಗಳೂರು:</strong> ಸಾರ್ವಜನಿಕರನ್ನು ಅಡ್ಡಗಟ್ಟಿ ಕೊಲೆ ಬೆದರಿಕೆಯೊಡ್ಡಿ ಮೊಬೈಲ್ ಹಾಗೂ ದ್ವಿಚಕ್ರ ವಾಹನ ಸುಲಿಗೆ ಮಾಡುತ್ತಿದ್ದ ಆರೋಪದಡಿ ಮೂವರನ್ನು ವಿ.ವಿ.ಪುರ ಪೊಲೀಸರು ಬಂಧಿಸಿದ್ದಾರೆ.</p>.<p>‘ಪಾದರಾಯನಪುರ ನಿವಾಸಿ ಇಮ್ರಾನ್ ಖಾನ್ ಅಲಿಯಾಸ್ ಬಡಾ ಮಚ್ಚರ್ (24), ಇರ್ಫಾನ್ ಪಾಷಾ ಅಲಿಯಾಸ್ ಚೋಟಾ ಮಚ್ಚರ್ (19) ಹಾಗೂ ಓಕಳಿಪುರದ ರಾಜು ಸಿಂಗ್ (27) ಬಂಧಿತರು. ಅವರಿಂದ ₹ 8.20 ಲಕ್ಷ ಮೌಲ್ಯದ 70 ಮೊಬೈಲ್ಗಳು, 2 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ವಿ.ವಿ. ಪುರ, ಚಾಮರಾಜಪೇಟೆ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಮೊಬೈಲ್ ಸುಲಿಗೆ ಪ್ರಕರಣಗಳು ಹೆಚ್ಚಾಗಿದ್ದವು. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿತ್ತು’ ಎಂದು ತಿಳಿಸಿದರು.</p>.<p>‘ಜೆ.ಸಿ.ರಸ್ತೆಯಲ್ಲಿ ಕಾರುಗಳಿಗೆ ಸ್ಟಿಕ್ಕರ್ ಅಂಟಿಸುವ ಕೆಲಸ ಮಾಡಿಕೊಂಡಿದ್ದ ಬಡಾ ಮಚ್ಚರ್, ಮೊಬೈಲ್ ಹಾಗೂ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ. ಆತನ ವಿರುದ್ಧ ಚಂದ್ರಾ ಲೇಔಟ್ ಠಾಣೆಯಲ್ಲಿ ಈ ಹಿಂದೆಯೇ ಪ್ರಕರಣ ದಾಖಲಾಗಿತ್ತು. ಇನ್ನೊಬ್ಬ ಆರೋಪಿ ಚೋಟಾ ಮಚ್ಚರ್, ಮೆಜೆಸ್ಟಿಕ್ ಪಾದಚಾರಿ ಮಾರ್ಗದಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ. ಈತನ ವಿರುದ್ಧ ವಿ.ವಿ.ಪುರ, ಸಿದ್ದಾಪುರ ಹಾಗೂ ಚಂದ್ರಾ ಲೇಔಟ್ ಠಾಣೆಯಲ್ಲಿ ಸುಲಿಗೆ ಪ್ರಕರಣಗಳು ದಾಖಲಾಗಿದ್ದವು’ ಎಂದೂ ಪೊಲೀಸರು ಹೇಳಿದರು.</p>.<p>‘ಇಬ್ಬರೂ ಆರೋಪಿಗಳು ಒಟ್ಟಿಗೆ ಸೇರಿ ಮೊಬೈಲ್ ಹಾಗೂ ದ್ವಿಚಕ್ರ ವಾಹನಗಳನ್ನು ಸುಲಿಗೆ ಮಾಡಲಾರಂಭಿಸಿದ್ದರು. ಅವರ ಕೃತ್ಯದ ಬಗ್ಗೆ ಹಲವು ಸಾರ್ವಜನಿಕರು ದೂರು ನೀಡಿದ್ದರು’ ಎಂದೂ ತಿಳಿಸಿದರು.</p>.<p class="Subhead">ಮೊಬೈಲ್ ಮಳಿಗೆ ಇಟ್ಟುಕೊಂಡಿದ್ದ ಆರೋಪಿ: ‘ಪ್ರಕರಣದ ಆರೋಪಿ ರಾಜುಸಿಂಗ್, ಗಾಂಧಿನಗರದ ಎಸ್.ಎನ್. ಬಜಾರ್ನಲ್ಲಿ ಮೊಬೈಲ್ ದುರಸ್ತಿ ಮಳಿಗೆ ಇಟ್ಟುಕೊಂಡಿದ್ದ. ಆರೋಪಿಗಳು ಸುಲಿಗೆ ಮಾಡಿ ತಂದುಕೊಡುತ್ತಿದ್ದ ಮೊಬೈಲ್ಗಳ ಬಿಡಿಭಾಗಗಳನ್ನು ಬೇರ್ಪಡಿಸಿ ಮಾರಾಟ ಮಾಡುತ್ತಿದ್ದ’ ಎಂದೂ ಪೊಲೀಸರು ಹೇಳಿದರು.</p>.<p>‘ರಾತ್ರಿ ಸಂದರ್ಭದಲ್ಲೇ ಆರೋಪಿಗಳು ಹೆಚ್ಚು ಸುಲಿಗೆ ಮಾಡುತ್ತಿದ್ದರು. ಮೊಬೈಲ್ಗಳನ್ನು ರಾಜುಸಿಂಗ್ಗೆ ಕೊಟ್ಟು ಹಣ ಪಡೆಯುತ್ತಿದ್ದರು’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾರ್ವಜನಿಕರನ್ನು ಅಡ್ಡಗಟ್ಟಿ ಕೊಲೆ ಬೆದರಿಕೆಯೊಡ್ಡಿ ಮೊಬೈಲ್ ಹಾಗೂ ದ್ವಿಚಕ್ರ ವಾಹನ ಸುಲಿಗೆ ಮಾಡುತ್ತಿದ್ದ ಆರೋಪದಡಿ ಮೂವರನ್ನು ವಿ.ವಿ.ಪುರ ಪೊಲೀಸರು ಬಂಧಿಸಿದ್ದಾರೆ.</p>.<p>‘ಪಾದರಾಯನಪುರ ನಿವಾಸಿ ಇಮ್ರಾನ್ ಖಾನ್ ಅಲಿಯಾಸ್ ಬಡಾ ಮಚ್ಚರ್ (24), ಇರ್ಫಾನ್ ಪಾಷಾ ಅಲಿಯಾಸ್ ಚೋಟಾ ಮಚ್ಚರ್ (19) ಹಾಗೂ ಓಕಳಿಪುರದ ರಾಜು ಸಿಂಗ್ (27) ಬಂಧಿತರು. ಅವರಿಂದ ₹ 8.20 ಲಕ್ಷ ಮೌಲ್ಯದ 70 ಮೊಬೈಲ್ಗಳು, 2 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ವಿ.ವಿ. ಪುರ, ಚಾಮರಾಜಪೇಟೆ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಮೊಬೈಲ್ ಸುಲಿಗೆ ಪ್ರಕರಣಗಳು ಹೆಚ್ಚಾಗಿದ್ದವು. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿತ್ತು’ ಎಂದು ತಿಳಿಸಿದರು.</p>.<p>‘ಜೆ.ಸಿ.ರಸ್ತೆಯಲ್ಲಿ ಕಾರುಗಳಿಗೆ ಸ್ಟಿಕ್ಕರ್ ಅಂಟಿಸುವ ಕೆಲಸ ಮಾಡಿಕೊಂಡಿದ್ದ ಬಡಾ ಮಚ್ಚರ್, ಮೊಬೈಲ್ ಹಾಗೂ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ. ಆತನ ವಿರುದ್ಧ ಚಂದ್ರಾ ಲೇಔಟ್ ಠಾಣೆಯಲ್ಲಿ ಈ ಹಿಂದೆಯೇ ಪ್ರಕರಣ ದಾಖಲಾಗಿತ್ತು. ಇನ್ನೊಬ್ಬ ಆರೋಪಿ ಚೋಟಾ ಮಚ್ಚರ್, ಮೆಜೆಸ್ಟಿಕ್ ಪಾದಚಾರಿ ಮಾರ್ಗದಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ. ಈತನ ವಿರುದ್ಧ ವಿ.ವಿ.ಪುರ, ಸಿದ್ದಾಪುರ ಹಾಗೂ ಚಂದ್ರಾ ಲೇಔಟ್ ಠಾಣೆಯಲ್ಲಿ ಸುಲಿಗೆ ಪ್ರಕರಣಗಳು ದಾಖಲಾಗಿದ್ದವು’ ಎಂದೂ ಪೊಲೀಸರು ಹೇಳಿದರು.</p>.<p>‘ಇಬ್ಬರೂ ಆರೋಪಿಗಳು ಒಟ್ಟಿಗೆ ಸೇರಿ ಮೊಬೈಲ್ ಹಾಗೂ ದ್ವಿಚಕ್ರ ವಾಹನಗಳನ್ನು ಸುಲಿಗೆ ಮಾಡಲಾರಂಭಿಸಿದ್ದರು. ಅವರ ಕೃತ್ಯದ ಬಗ್ಗೆ ಹಲವು ಸಾರ್ವಜನಿಕರು ದೂರು ನೀಡಿದ್ದರು’ ಎಂದೂ ತಿಳಿಸಿದರು.</p>.<p class="Subhead">ಮೊಬೈಲ್ ಮಳಿಗೆ ಇಟ್ಟುಕೊಂಡಿದ್ದ ಆರೋಪಿ: ‘ಪ್ರಕರಣದ ಆರೋಪಿ ರಾಜುಸಿಂಗ್, ಗಾಂಧಿನಗರದ ಎಸ್.ಎನ್. ಬಜಾರ್ನಲ್ಲಿ ಮೊಬೈಲ್ ದುರಸ್ತಿ ಮಳಿಗೆ ಇಟ್ಟುಕೊಂಡಿದ್ದ. ಆರೋಪಿಗಳು ಸುಲಿಗೆ ಮಾಡಿ ತಂದುಕೊಡುತ್ತಿದ್ದ ಮೊಬೈಲ್ಗಳ ಬಿಡಿಭಾಗಗಳನ್ನು ಬೇರ್ಪಡಿಸಿ ಮಾರಾಟ ಮಾಡುತ್ತಿದ್ದ’ ಎಂದೂ ಪೊಲೀಸರು ಹೇಳಿದರು.</p>.<p>‘ರಾತ್ರಿ ಸಂದರ್ಭದಲ್ಲೇ ಆರೋಪಿಗಳು ಹೆಚ್ಚು ಸುಲಿಗೆ ಮಾಡುತ್ತಿದ್ದರು. ಮೊಬೈಲ್ಗಳನ್ನು ರಾಜುಸಿಂಗ್ಗೆ ಕೊಟ್ಟು ಹಣ ಪಡೆಯುತ್ತಿದ್ದರು’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>