<p><strong>ಬೆಂಗಳೂರು:</strong> ಸಾಫ್ಟ್ವೇರ್ ಎಂಜಿನಿಯರೊಬ್ಬರ ಮೊಬೈಲ್ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಆರೋಪಿ ಸಿತೇಶ್ನನ್ನು ಹೆಡ್ ಕಾನ್ಸ್ಟೆಬಲ್ ಎಚ್.ಆರ್. ಮೋಹನ್ ಕುಮಾರ್ ಅವರು ಬೆನ್ನಟ್ಟಿ ಹಿಡಿದು, ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಸುಪರ್ದಿಗೆ ಒಪ್ಪಿಸಿದ್ದಾರೆ.</p>.<p>ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಕರ್ತವ್ಯದಲ್ಲಿದ್ದ ಮೋಹನ್, ಆರೋಪಿಯನ್ನು ಬೆನ್ನಟ್ಟಿ ಹಿಡಿದಿದ್ದಕ್ಕೆ ಡಿಸಿಪಿ ಕುಲ್ದೀಪ್ಕುಮಾರ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.</p>.<p>ಆಗಿದ್ದೇನು: ‘ಕುಂದಲಹಳ್ಳಿ ಐಟಿಪಿಎಲ್ ರಸ್ತೆಯಲ್ಲಿರುವ ಪ್ರೆಸ್ಟೀಜ್ ಟೆಕ್ ಪಾರ್ಕ್ ಬಳಿಯ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಎಂಜಿನಿಯರ್ ಶಾಂತನಿ ಚಕ್ರವರ್ತಿ, ಸಂಜೆ ಕೆಲಸ ಮುಗಿಸಿ ರಸ್ತೆಯಲ್ಲಿ ನಡೆದುಕೊಂಡು ಮೊಬೈಲ್ನಲ್ಲಿ ಮಾತನಾಡುತ್ತ ಮನೆಯತ್ತ ಹೊರಟಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಶಾಂತನಿ ಅವರನ್ನು ಹಿಂಬಾಲಿಸಿದ್ದ ಆರೋಪಿ, ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದ. ಕಳ್ಳ... ಕಳ್ಳ... ಎಂದು ಶಾಂತನಿ ಕೂಗಾಡಿದ್ದರು. ಸಮೀಪದ ಆಂಜನೇಯ ಜಂಕ್ಷನ್ನಲ್ಲಿ ಕರ್ತವ್ಯದಲ್ಲಿದ್ದ ಎಚ್.ಎ.ಎಲ್ ಸಂಚಾರ ಠಾಣೆಯ ಹೆಡ್ ಕಾನ್ಸ್ಟೆಬಲ್ ಮೋಹನ್, ಆರೋಪಿಯನ್ನು ಬೆನ್ನಟ್ಟಿದ್ದರು. ಸಾರ್ವಜನಿಕರ ಸಹಾಯದಿಂದ ಆರೋಪಿಯನ್ನು ಹಿಡಿದುಕೊಂಡಿದ್ದರು.’</p>.<p>‘ಸುಲಿಗೆ ಆರೋಪಿ ಸಿಕ್ಕಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ಹೋಗಿತ್ತು. ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದರು. ಅವರೇ ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾಫ್ಟ್ವೇರ್ ಎಂಜಿನಿಯರೊಬ್ಬರ ಮೊಬೈಲ್ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಆರೋಪಿ ಸಿತೇಶ್ನನ್ನು ಹೆಡ್ ಕಾನ್ಸ್ಟೆಬಲ್ ಎಚ್.ಆರ್. ಮೋಹನ್ ಕುಮಾರ್ ಅವರು ಬೆನ್ನಟ್ಟಿ ಹಿಡಿದು, ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಸುಪರ್ದಿಗೆ ಒಪ್ಪಿಸಿದ್ದಾರೆ.</p>.<p>ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಕರ್ತವ್ಯದಲ್ಲಿದ್ದ ಮೋಹನ್, ಆರೋಪಿಯನ್ನು ಬೆನ್ನಟ್ಟಿ ಹಿಡಿದಿದ್ದಕ್ಕೆ ಡಿಸಿಪಿ ಕುಲ್ದೀಪ್ಕುಮಾರ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.</p>.<p>ಆಗಿದ್ದೇನು: ‘ಕುಂದಲಹಳ್ಳಿ ಐಟಿಪಿಎಲ್ ರಸ್ತೆಯಲ್ಲಿರುವ ಪ್ರೆಸ್ಟೀಜ್ ಟೆಕ್ ಪಾರ್ಕ್ ಬಳಿಯ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಎಂಜಿನಿಯರ್ ಶಾಂತನಿ ಚಕ್ರವರ್ತಿ, ಸಂಜೆ ಕೆಲಸ ಮುಗಿಸಿ ರಸ್ತೆಯಲ್ಲಿ ನಡೆದುಕೊಂಡು ಮೊಬೈಲ್ನಲ್ಲಿ ಮಾತನಾಡುತ್ತ ಮನೆಯತ್ತ ಹೊರಟಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಶಾಂತನಿ ಅವರನ್ನು ಹಿಂಬಾಲಿಸಿದ್ದ ಆರೋಪಿ, ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದ. ಕಳ್ಳ... ಕಳ್ಳ... ಎಂದು ಶಾಂತನಿ ಕೂಗಾಡಿದ್ದರು. ಸಮೀಪದ ಆಂಜನೇಯ ಜಂಕ್ಷನ್ನಲ್ಲಿ ಕರ್ತವ್ಯದಲ್ಲಿದ್ದ ಎಚ್.ಎ.ಎಲ್ ಸಂಚಾರ ಠಾಣೆಯ ಹೆಡ್ ಕಾನ್ಸ್ಟೆಬಲ್ ಮೋಹನ್, ಆರೋಪಿಯನ್ನು ಬೆನ್ನಟ್ಟಿದ್ದರು. ಸಾರ್ವಜನಿಕರ ಸಹಾಯದಿಂದ ಆರೋಪಿಯನ್ನು ಹಿಡಿದುಕೊಂಡಿದ್ದರು.’</p>.<p>‘ಸುಲಿಗೆ ಆರೋಪಿ ಸಿಕ್ಕಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ಹೋಗಿತ್ತು. ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದರು. ಅವರೇ ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>