ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋಜು– ಮಸ್ತಿಗೆ ಹಣ ಹೊಂದಿಸಲು ಕಳ್ಳತನ

Last Updated 8 ಡಿಸೆಂಬರ್ 2022, 16:46 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಹಲವೆಡೆ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.

‘ಸೈಯದ್ ವಸೀಂ (27) ಹಾಗೂ ಅನೀಸ್ ಅಲಿಯಾಸ್ ಅನ್ವರ್ (24) ಬಂಧಿತರು. ಇವರಿಂದ ₹ 1.37 ಲಕ್ಷ ಮೌಲ್ಯದ ದ್ವಿಚಕ್ರ ವಾಹನ ಹಾಗೂ ಎರಡು ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಠಾಣೆ ವ್ಯಾಪ್ತಿಯ ರಾಮಚಂದ್ರಪುರದಲ್ಲಿ ಡಿ. 4ರಂದು ಸುತ್ತಾಡಿದ್ದ ಆರೋಪಿಗಳು, ನಿವಾಸಿಯೊಬ್ಬರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು. ಸಿಸಿಟಿವಿ ಕ್ಯಾಮೆರಾ ದೃಶ್ಯ ಹಾಗೂ ಇತರೆ ಪುರಾವೆಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲಾಗಿದೆ.’

‘ಮೋಜು–ಮಸ್ತಿ ಮಾಡಲು ಅಗತ್ಯವಿದ್ದ ಹಣ ಹೊಂದಿಸಲು ಆರೋಪಿಗಳು ಕಳ್ಳತನ ಮಾಡುತ್ತಿದ್ದರು. ಭಾರತಿನಗರ, ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲೂ ಕೃತ್ಯ ಎಸಗಿದ್ದರು’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT