ಆಂಧ್ರಪ್ರದೇಶದಿಂದ ಕಾರಿನಲ್ಲಿ ನಗರದ ಹೊರವಲಯಕ್ಕೆ ಆರೋಪಿಗಳು ಬರುತ್ತಿದ್ದರು. ಬಳಿಕ, ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಪ್ರಯಾಣಿಸುತ್ತಿದ್ದರು. ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಪ್ರಯಾಣಿಕರ ಜೇಬಿನಲ್ಲಿದ್ದ ಮೊಬೈಲ್ ಕದ್ದು ಪರಾರಿ ಆಗುತ್ತಿದ್ದರು. ಕೃತ್ಯ ಎಸಗಲು ಮೆಜೆಸ್ಟಿಕ್ ಹಾಗೂ ಹೆಚ್ಚು ಪ್ರಯಾಣಿಕರು ಇರುವ ನಿಲ್ದಾಣಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದರು ಎಂದು ಪೊಲೀಸರು ಹೇಳಿದರು.