‘ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಾಟನ್ಪೇಟೆ, ಬ್ಯಾಡರಹಳ್ಳಿ, ಮಹಾಲಕ್ಷ್ಮೀ ಬಡಾವಣೆ ಸೇರಿದಂತೆ ಹಲವೆಡೆ ದ್ವಿಚಕ್ರ ವಾಹನಗಳನ್ನು ಕದ್ದಿದ್ದರು. ಅದೇ ವಾಹನಗಳಲ್ಲಿ ತೆರಳಿ, ಶಾಂತಲಾ ವೃತ್ತ, ಮೆಜೆಸ್ಟಿಕ್, ರೈಲ್ವೆ ನಿಲ್ದಾಣಗಳ ಬಳಿ ಸಾರ್ವಜನಿಕರನ್ನು ಬೆದರಿಸಿ ಮೊಬೈಲ್ ಕದ್ದಿರುವ ವಿಚಾರ ತಿಳಿಸಿದರು’ ಎಂದು ಪೊಲೀಸರು ಮಾಹಿತಿ ನೀಡಿದರು.