‘ತುಮಕೂರು, ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿ–ಧಾರವಾಡ, ಬೆಳಗಾವಿ ಸೇರಿ ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಉತ್ತರ ಭಾರತದ ರಾಜ್ಯಗಳಿಂದ ಬೆಂಗಳೂರಿಗೆ ಬರುವ ವಾಹನಗಳು ಗೊರಗುಂಟೆಪಾಳ್ಯ ಮಾರ್ಗವಾಗಿ ಹಾದು ಹೋಗುತ್ತವೆ. ಪ್ರಯಾಣಿಕರು ಇಳಿಯುವ ಹಾಗೂ ಹತ್ತುವ ಪ್ರಮುಖ ಸ್ಥಳ ಇದಾಗಿದೆ. ಇಂಥ ಸ್ಥಳದಲ್ಲಿ ವ್ಯವಸ್ಥಿತ ಶೌಚಾಲಯ ಇಲ್ಲದಿದ್ದರಿಂದ, ಮಲ–ಮೂತ್ರ ವಿಸರ್ಜನೆಗಾಗಿ ಜನರು ಯಾತನೆ ಅನುಭವಿಸುತ್ತಿದ್ದರು’ ಎಂದು ಪಿಎಸ್ಐ ಶಾಂತಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.