<p><strong>ಪೀಣ್ಯ ದಾಸರಹಳ್ಳಿ:</strong> 'ಆಡಳಿತ ಸುಧಾರಾಣ ಸಮಿತಿ ಅಧ್ಯಕ್ಷರಾಗಿ ಕೆಂಗಲ್ ಹನುಮಂತಯ್ಯ ಅವರು ಸಲ್ಲಿಸಿದ್ದ ವರದಿಯಲ್ಲಿ ಶೇ 75ರಷ್ಟು ಅನುಷ್ಠಾನವಾಗಿದ್ದು, ಇದು ಅವರ ದೂರದೃಷ್ಟಿ ಮತ್ತು ಆಡಳಿತ ವೈಖರಿಗೆ ಸಾಕ್ಷಿಯಾಗಿದೆ’ ಎಂದು ಮೈಸೂರಿನ ಕಥೆಗಳು ಖ್ಯಾತಿಯ ಧರ್ಮೇಂದ್ರ ಕುಮಾರ್ ತಿಳಿಸಿದರು.</p>.<p>ಸುಂಕದಕಟ್ಟೆಯ ವಿದ್ಯಾನಿಕೇತನ ಶಾಲೆಯಲ್ಲಿ ಹಸಿರು ಪ್ರತಿಷ್ಠಾನವು ಅಯೋಜಿಸಿದ್ದ ಕೆಂಗಲ್ ಹನುಮಂತಯ್ಯನವರ ಜನ್ಮದಿಚಾರಣೆ ಉದ್ಘಾಟಿಸಿ ಮಾತನಾಡಿದರು.</p>.<p>‘ಕರ್ನಾಟಕ ಏಕೀಕರಣದಲ್ಲಿ ಪ್ರಮುಖ ಪಾತ್ರವಹಿಸಿದವರು ಕೆಂಗಲ್ ಹನುಮಂತಯ್ಯನವರು, ಅಷ್ಟೇ ಅಲ್ಲ ಶಾಸಕಾಂಗ ಸಭೆಯ ವಿರೋಧದ ನಡುವೆಯೂ ಮದ್ಯಪಾನ ನಿಷೇಧ ಜಾರಿ ಮಾಡಿದ ಮೊದಲ ಮತ್ತು ಕೊನೆಯ ಮುಖ್ಯಮಂತ್ರಿಯೂ ಹೌದು’ ಎಂದು ಬಣ್ಣಿಸಿದರು.</p>.<p>ಹಸಿರು ಪ್ರತಿಷ್ಠಾನ ಅಧ್ಯಕ್ಷ ಕೆ.ಜಿ.ಕುಮಾರ್ ಮಾತನಾಡಿ, 'ಕೆಂಗಲ್ ಅವರು ವಿಧಾನಸೌಧ ನಿರ್ಮಾತೃ ಅಷ್ಟೇ ಅಲ್ಲದೇ, ಬೆಂಗಳೂರು ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದು’ ಎಂದರು</p>.<p>‘ಬೆಂಗಳೂರನ್ನು ಕಟ್ಟಿದವರು ಕೆಂಪೇಗೌಡರು. ಆಧುನಿಕ ಬೆಂಗಳೂರು ನಿರ್ಮಾತೃ ಕೆಂಗಲ್ ಹನುಮಂತಯ್ಯ. ಅಂತಹ ಮಹನೀಯರನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ’ ಎಂದು ತಿಳಿಸಿದರು.</p>.<p>ಸಮನ್ವಯ ಪ್ರತಿಷ್ಠಾನ ಅಧ್ಯಕ್ಷ ಗೋವಿಂದರಾಜು ಪಟೇಲ್, ವಿದ್ಯಾನಿಕೇತನ ಶಾಲೆಯ ಕಾರ್ಯದರ್ಶಿ ಧನಂಜಯ್, ರಾಜೀವ್ ಗಾಂಧಿ ಶಾಲೆಯ ಕಾರ್ಯದರ್ಶಿ ಯುವರಾಜ್, ಶಿಕ್ಷಕ ಶ್ರೀನಿವಾಸ್, ಕಮಲ, ನಾಗರತ್ನ, ಜನಪರ ಹೋರಾಟಗಾರರು, ಕನ್ನಡಪರ ಸಂಘಟನೆಗಳು, ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> 'ಆಡಳಿತ ಸುಧಾರಾಣ ಸಮಿತಿ ಅಧ್ಯಕ್ಷರಾಗಿ ಕೆಂಗಲ್ ಹನುಮಂತಯ್ಯ ಅವರು ಸಲ್ಲಿಸಿದ್ದ ವರದಿಯಲ್ಲಿ ಶೇ 75ರಷ್ಟು ಅನುಷ್ಠಾನವಾಗಿದ್ದು, ಇದು ಅವರ ದೂರದೃಷ್ಟಿ ಮತ್ತು ಆಡಳಿತ ವೈಖರಿಗೆ ಸಾಕ್ಷಿಯಾಗಿದೆ’ ಎಂದು ಮೈಸೂರಿನ ಕಥೆಗಳು ಖ್ಯಾತಿಯ ಧರ್ಮೇಂದ್ರ ಕುಮಾರ್ ತಿಳಿಸಿದರು.</p>.<p>ಸುಂಕದಕಟ್ಟೆಯ ವಿದ್ಯಾನಿಕೇತನ ಶಾಲೆಯಲ್ಲಿ ಹಸಿರು ಪ್ರತಿಷ್ಠಾನವು ಅಯೋಜಿಸಿದ್ದ ಕೆಂಗಲ್ ಹನುಮಂತಯ್ಯನವರ ಜನ್ಮದಿಚಾರಣೆ ಉದ್ಘಾಟಿಸಿ ಮಾತನಾಡಿದರು.</p>.<p>‘ಕರ್ನಾಟಕ ಏಕೀಕರಣದಲ್ಲಿ ಪ್ರಮುಖ ಪಾತ್ರವಹಿಸಿದವರು ಕೆಂಗಲ್ ಹನುಮಂತಯ್ಯನವರು, ಅಷ್ಟೇ ಅಲ್ಲ ಶಾಸಕಾಂಗ ಸಭೆಯ ವಿರೋಧದ ನಡುವೆಯೂ ಮದ್ಯಪಾನ ನಿಷೇಧ ಜಾರಿ ಮಾಡಿದ ಮೊದಲ ಮತ್ತು ಕೊನೆಯ ಮುಖ್ಯಮಂತ್ರಿಯೂ ಹೌದು’ ಎಂದು ಬಣ್ಣಿಸಿದರು.</p>.<p>ಹಸಿರು ಪ್ರತಿಷ್ಠಾನ ಅಧ್ಯಕ್ಷ ಕೆ.ಜಿ.ಕುಮಾರ್ ಮಾತನಾಡಿ, 'ಕೆಂಗಲ್ ಅವರು ವಿಧಾನಸೌಧ ನಿರ್ಮಾತೃ ಅಷ್ಟೇ ಅಲ್ಲದೇ, ಬೆಂಗಳೂರು ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದು’ ಎಂದರು</p>.<p>‘ಬೆಂಗಳೂರನ್ನು ಕಟ್ಟಿದವರು ಕೆಂಪೇಗೌಡರು. ಆಧುನಿಕ ಬೆಂಗಳೂರು ನಿರ್ಮಾತೃ ಕೆಂಗಲ್ ಹನುಮಂತಯ್ಯ. ಅಂತಹ ಮಹನೀಯರನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ’ ಎಂದು ತಿಳಿಸಿದರು.</p>.<p>ಸಮನ್ವಯ ಪ್ರತಿಷ್ಠಾನ ಅಧ್ಯಕ್ಷ ಗೋವಿಂದರಾಜು ಪಟೇಲ್, ವಿದ್ಯಾನಿಕೇತನ ಶಾಲೆಯ ಕಾರ್ಯದರ್ಶಿ ಧನಂಜಯ್, ರಾಜೀವ್ ಗಾಂಧಿ ಶಾಲೆಯ ಕಾರ್ಯದರ್ಶಿ ಯುವರಾಜ್, ಶಿಕ್ಷಕ ಶ್ರೀನಿವಾಸ್, ಕಮಲ, ನಾಗರತ್ನ, ಜನಪರ ಹೋರಾಟಗಾರರು, ಕನ್ನಡಪರ ಸಂಘಟನೆಗಳು, ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>