ರಾಜರಾಜೇಶ್ವರಿನಗರ: ದೇಶದ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕೈಯನ್ನು ಮತ್ತೊಮ್ಮೆ ಬಲ ಪಡಿಸಬೇಕು ಎಂದು ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಕರೆ ನೀಡಿದರು.
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಡವರ, ಸಾಮಾನ್ಯ ಜನರ ಹಿತಕ್ಕಾಗಿ, ಸರಳ ವ್ಯಕ್ತಿತ್ವದ ಅಭ್ಯರ್ಥಿಗೆ ನಿಮ್ಮೆಲ್ಲರ ಸಹಕಾರಬೇಕಾಗಿದೆ ಎಂದರು.
ರಾಷ್ಟ್ರದ ಪ್ರಗತಿ, ಅಭಿವೃದ್ಧಿಗಾಗಿ, ಮತ್ತೊಮ್ಮೆ ನರೇಂದ್ರ ಮೋದಿ ಅವರ ನಾಯಕತ್ವವನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಲು ಬಿಜೆಪಿಗೆ ಮತನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಕೇಶವ ಪ್ರಸಾದ್ ಹೇಳಿದರು.
ಶಾಸಕ ಮುನಿರತ್ನ, ವಿಧಾನ ಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ, ನಿರ್ಮಲ್ ಕುಮಾರ್ ಸುರಾನ, ಜೆಡಿಎಸ್ ನಾಯಕ ಎ.ಪಿ.ರಂಗನಾಥ್, ಅಭ್ಯರ್ಥಿ ಮಂಜುನಾಥ್ ಅವರ ಪತ್ನಿ ಅನಸೂಯ ಮಂಜುನಾಥ್, ಬೆಂಗಳೂರು ಕೇಂದ್ರ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಮಂಜುನಾಥ್ ಹಾಜರಿದ್ದರು.