<p><strong>ಬೆಂಗಳೂರು</strong>: ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆಗೆ ಸಂಬಂಧಪಡದ ಅಮಾಯಕ ಮುಸ್ಲಿಮರನ್ನು ಪೊಲೀಸರು ಬಂಧಿಸುತ್ತಿದ್ದು, ಅವರಿಗೆ ಸೂಕ್ತ ರಕ್ಷಣೆ ಕೊಡಬೇಕು ಎಂದು ಮಹಮ್ಮದೀಯರ ಕನ್ನಡ ವೇದಿಕೆಯು ಗೃಹ ಸಚಿವರಿಗೆ ಮನವಿ ಸಲ್ಲಿಸಿದೆ.</p>.<p>ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ವೇದಿಕೆಯ ಅಧ್ಯಕ್ಷ ಸಮೀವುಲ್ಲಾ ಖಾನ್, ಪದಾಧಿಕಾರಿಗಳಾದ ಎನ್. ನಜೀರ್, ಷಹಜಹಾನ್, ಸಾಗರ್ ಸಮೀವುಲ್ಲಾ ಮೊದಲಾದವರು ಈ ಕುರಿತು ಮನವಿ ಸಲ್ಲಿಸಿದರು.</p>.<p>ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಿ. ಮುಗ್ಧರಿಗೆ ಅನ್ಯಾಯ ಆಗದಂತೆ, ಬಡವರ ಬದುಕಿಗೆ ಬರೆ ಬೀಳದಂತೆ ನೋಡಿಕೊಳ್ಳುವಂತೆ ಇಲಾಖೆಗೆ ತಾಕೀತು ಮಾಡಬೇಕೆಂದು ಮನವಿಯಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆಗೆ ಸಂಬಂಧಪಡದ ಅಮಾಯಕ ಮುಸ್ಲಿಮರನ್ನು ಪೊಲೀಸರು ಬಂಧಿಸುತ್ತಿದ್ದು, ಅವರಿಗೆ ಸೂಕ್ತ ರಕ್ಷಣೆ ಕೊಡಬೇಕು ಎಂದು ಮಹಮ್ಮದೀಯರ ಕನ್ನಡ ವೇದಿಕೆಯು ಗೃಹ ಸಚಿವರಿಗೆ ಮನವಿ ಸಲ್ಲಿಸಿದೆ.</p>.<p>ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ವೇದಿಕೆಯ ಅಧ್ಯಕ್ಷ ಸಮೀವುಲ್ಲಾ ಖಾನ್, ಪದಾಧಿಕಾರಿಗಳಾದ ಎನ್. ನಜೀರ್, ಷಹಜಹಾನ್, ಸಾಗರ್ ಸಮೀವುಲ್ಲಾ ಮೊದಲಾದವರು ಈ ಕುರಿತು ಮನವಿ ಸಲ್ಲಿಸಿದರು.</p>.<p>ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಿ. ಮುಗ್ಧರಿಗೆ ಅನ್ಯಾಯ ಆಗದಂತೆ, ಬಡವರ ಬದುಕಿಗೆ ಬರೆ ಬೀಳದಂತೆ ನೋಡಿಕೊಳ್ಳುವಂತೆ ಇಲಾಖೆಗೆ ತಾಕೀತು ಮಾಡಬೇಕೆಂದು ಮನವಿಯಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>