<p><strong>ಬೆಂಗಳೂರು:</strong> ನಗರದಿಂದ ಆಯ್ಕೆಯಾಗಿರುವ ನಾಲ್ವರು ಸಂಸದರ ಒಂದು ವರ್ಷದ ಸಾಧನೆ, 32 ಶಾಸಕರ ಎರಡು ವರ್ಷದ ಸಾಧನೆ ಏನು ಎಂಬುದರ ಬಗ್ಗೆ ‘ಸಿವಿಕ್’ ಸಂಸ್ಥೆಯು ನಾಗರಿಕ ವರದಿಯನ್ನು ಶನಿವಾರ ಬಿಡುಗಡೆ ಮಾಡಿದೆ.</p>.<p>ಸಂಸತ್ ಅಧಿವೇಶನದಲ್ಲಿ ಭಾಗವಹಿಸುವುದರಲ್ಲಿ ಪಿ.ಸಿ. ಮೋಹನ್ ಮೊದಲ ಸ್ಥಾನದಲ್ಲಿದ್ದರೆ, ಪ್ರಶ್ನೆ ಕೇಳುವುದರಲ್ಲಿ ತೇಜಸ್ವಿ ಸೂರ್ಯ ಮೊದಲ ಸ್ಥಾನ ಪಡೆದಿದ್ದಾರೆ. ಸಂಸದರ ನಿಧಿ ಬಳಕೆಯಲ್ಲಿ ಡಾ. ಸಿ.ಎನ್. ಮಂಜುನಾಥ್ ಮುಂಚೂಣಿಯಲ್ಲಿದ್ದಾರೆ ಎಂದು ವರದಿ ತಿಳಿಸಿದೆ.</p>.<p>ಕಲಾಪದಲ್ಲಿ ಸಂಸದ ಪಿ.ಸಿ. ಮೋಹನ್ ಅವರು ಶೇ 98.51, ಸಿ.ಎನ್.ಮಂಜುನಾಥ್ ಶೇ 94ರಷ್ಟು ಭಾಗವಹಿಸಿದ್ದಾರೆ. ರಾಷ್ಟ್ರೀಯ ಸರಾಸರಿಯು ಶೇ 87 ಆಗಿದ್ದು, ತೇಜಸ್ವಿ ಸೂರ್ಯ ಶೇ 77.6ರಷ್ಟು ಹಾಜರಾತಿ ಹೊಂದಿದ್ದಾರೆ. ಸಚಿವೆ ಶೋಭಾ ಕರಂದ್ಲಾಜೆ ಅವರ ಹಾಜರಾತಿ ವಿವರಗಳನ್ನು ವರದಿಯಲ್ಲಿ ನೀಡಿಲ್ಲ.</p>.<p>ತೇಜಸ್ವಿ ಸೂರ್ಯ 84 ಪ್ರಶ್ನೆಗಳನ್ನು ಕೇಳಿದ್ದರೆ, ಸಿ.ಎನ್. ಮಂಜುನಾಥ್ 9, ಪಿ.ಸಿ. ಮೋಹನ್ 1 ಪ್ರಶ್ನೆ ಮಾತ್ರ ಕೇಳಿದ್ದಾರೆ. ಮಂಜುನಾಥ್ ಶೇ 126.64, ತೇಜಸ್ವಿ ಸೂರ್ಯ ಶೇ 116, ಶೋಭಾ ಕರಂದ್ಲಾಜೆ ಶೇ 97.6ರಷ್ಟು ಸಂಸದರ ನಿಧಿ ಬಳಕೆ ಮಾಡಿದ್ದರೆ, ಪಿ.ಸಿ. ಮೋಹನ್ ಶೇ 9.48ರಷ್ಟು ಮಾತ್ರ ಬಳಕೆ ಮಾಡಿ ಕೊನೇ ಸ್ಥಾನದಲ್ಲಿದ್ದಾರೆ.</p>.<p>ಬೆಂಗಳೂರಿನ ಶಾಸಕರಿಗೆ ಸಂಬಂಧಿಸಿದಂತೆ ಸಾಧನೆ ನೋಡಿದರೆ ಶಾಸಕರ ನಿಧಿಯನ್ನು ಬಳಸುವಲ್ಲಿ ನಿರ್ಲಕ್ಷ್ಯ ಕಂಡು ಬಂದಿದೆ. ನಾಲ್ವರು ಶಾಸಕರು ಮಾತ್ರ ಸಂಪೂರ್ಣವಾಗಿ ಬಳಸಿಕೊಂಡಿದ್ದಾರೆ. ಆರು ಶಾಸಕರು ಶೇ 90ಕ್ಕಿಂತ ಅಧಿಕ ನಿಧಿ ಬಳಕೆ ಮಾಡಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.</p>.<p>ವಿಧಾನಸಭಾ ಕಲಾಪದಲ್ಲಿ ನೆಲಮಂಗಲದ ಎನ್. ಶ್ರೀನಿವಾಸ ಅವರು ಶೇ 100ರಷ್ಟು ಹಾಜರಾತಿ ಹೊಂದಿದ್ದಾರೆ. ಮೂವರು ಶಾಸಕರು ಶೇ 70ಕ್ಕಿಂತ ಕಡಿಮೆ ಹಾಜರಾತಿ ಹೊಂದಿದ್ದಾರೆ. ಶೇ 53.62ರಷ್ಟು ಹಾಜರಾತಿ ಹೊಂದಿರುವ ಪ್ರಿಯಕೃಷ್ಣ ಕೊನೆಯ ಸ್ಥಾನದಲ್ಲಿದ್ದಾರೆ.</p>.<p>ಬಹುತೇಕ ಶಾಸಕರ ಆದಾಯ ಹೆಚ್ಚಳವಾಗಿದೆ. ಕೆ.ಗೋಪಾಲಯ್ಯ (ಶೇ 1,3399) ಮತ್ತು ಮುನಿರತ್ನ (ಶೇ 959) ಆದಾಯ ವಿಪರೀತ ಏರಿಕೆಯಾಗಿದೆ. ಎನ್.ಎ. ಹ್ಯಾರಿಸ್ (ಶೇ 318) ಮತ್ತು ಆರ್.ಅಶೋಕ್ (ಶೇ 104) ಆನಂತರದ ಸ್ಥಾನ ಹೊಂದಿದ್ದಾರೆ.</p>.<p>ಕಾರ್ಯಕ್ರಮದಲ್ಲಿ ರಂಗಕರ್ಮಿ ಪ್ರಕಾಶ್ ಬೆಳವಾಡಿ, ಸಿವಿಕ್ ಬೆಂಗಳೂರು ಸಂಸ್ಥೆಯ ಕಾರ್ಯನಿರ್ವಾಹಕ ಟ್ರಸ್ಟಿ ಕಾತ್ಯಾಯಿನಿ ಚಾಮರಾಜ್, ಸದಸ್ಯ ಎ.ಕೃಷ್ಣ ಪ್ರಶಾಂತ್ ಉಪಸ್ಥಿತರಿದ್ದರು. ನಗರದ ವಿವಿಧ ಸಮಸ್ಯೆಗಳನ್ನು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಬಿಡಿಸಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಿಂದ ಆಯ್ಕೆಯಾಗಿರುವ ನಾಲ್ವರು ಸಂಸದರ ಒಂದು ವರ್ಷದ ಸಾಧನೆ, 32 ಶಾಸಕರ ಎರಡು ವರ್ಷದ ಸಾಧನೆ ಏನು ಎಂಬುದರ ಬಗ್ಗೆ ‘ಸಿವಿಕ್’ ಸಂಸ್ಥೆಯು ನಾಗರಿಕ ವರದಿಯನ್ನು ಶನಿವಾರ ಬಿಡುಗಡೆ ಮಾಡಿದೆ.</p>.<p>ಸಂಸತ್ ಅಧಿವೇಶನದಲ್ಲಿ ಭಾಗವಹಿಸುವುದರಲ್ಲಿ ಪಿ.ಸಿ. ಮೋಹನ್ ಮೊದಲ ಸ್ಥಾನದಲ್ಲಿದ್ದರೆ, ಪ್ರಶ್ನೆ ಕೇಳುವುದರಲ್ಲಿ ತೇಜಸ್ವಿ ಸೂರ್ಯ ಮೊದಲ ಸ್ಥಾನ ಪಡೆದಿದ್ದಾರೆ. ಸಂಸದರ ನಿಧಿ ಬಳಕೆಯಲ್ಲಿ ಡಾ. ಸಿ.ಎನ್. ಮಂಜುನಾಥ್ ಮುಂಚೂಣಿಯಲ್ಲಿದ್ದಾರೆ ಎಂದು ವರದಿ ತಿಳಿಸಿದೆ.</p>.<p>ಕಲಾಪದಲ್ಲಿ ಸಂಸದ ಪಿ.ಸಿ. ಮೋಹನ್ ಅವರು ಶೇ 98.51, ಸಿ.ಎನ್.ಮಂಜುನಾಥ್ ಶೇ 94ರಷ್ಟು ಭಾಗವಹಿಸಿದ್ದಾರೆ. ರಾಷ್ಟ್ರೀಯ ಸರಾಸರಿಯು ಶೇ 87 ಆಗಿದ್ದು, ತೇಜಸ್ವಿ ಸೂರ್ಯ ಶೇ 77.6ರಷ್ಟು ಹಾಜರಾತಿ ಹೊಂದಿದ್ದಾರೆ. ಸಚಿವೆ ಶೋಭಾ ಕರಂದ್ಲಾಜೆ ಅವರ ಹಾಜರಾತಿ ವಿವರಗಳನ್ನು ವರದಿಯಲ್ಲಿ ನೀಡಿಲ್ಲ.</p>.<p>ತೇಜಸ್ವಿ ಸೂರ್ಯ 84 ಪ್ರಶ್ನೆಗಳನ್ನು ಕೇಳಿದ್ದರೆ, ಸಿ.ಎನ್. ಮಂಜುನಾಥ್ 9, ಪಿ.ಸಿ. ಮೋಹನ್ 1 ಪ್ರಶ್ನೆ ಮಾತ್ರ ಕೇಳಿದ್ದಾರೆ. ಮಂಜುನಾಥ್ ಶೇ 126.64, ತೇಜಸ್ವಿ ಸೂರ್ಯ ಶೇ 116, ಶೋಭಾ ಕರಂದ್ಲಾಜೆ ಶೇ 97.6ರಷ್ಟು ಸಂಸದರ ನಿಧಿ ಬಳಕೆ ಮಾಡಿದ್ದರೆ, ಪಿ.ಸಿ. ಮೋಹನ್ ಶೇ 9.48ರಷ್ಟು ಮಾತ್ರ ಬಳಕೆ ಮಾಡಿ ಕೊನೇ ಸ್ಥಾನದಲ್ಲಿದ್ದಾರೆ.</p>.<p>ಬೆಂಗಳೂರಿನ ಶಾಸಕರಿಗೆ ಸಂಬಂಧಿಸಿದಂತೆ ಸಾಧನೆ ನೋಡಿದರೆ ಶಾಸಕರ ನಿಧಿಯನ್ನು ಬಳಸುವಲ್ಲಿ ನಿರ್ಲಕ್ಷ್ಯ ಕಂಡು ಬಂದಿದೆ. ನಾಲ್ವರು ಶಾಸಕರು ಮಾತ್ರ ಸಂಪೂರ್ಣವಾಗಿ ಬಳಸಿಕೊಂಡಿದ್ದಾರೆ. ಆರು ಶಾಸಕರು ಶೇ 90ಕ್ಕಿಂತ ಅಧಿಕ ನಿಧಿ ಬಳಕೆ ಮಾಡಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.</p>.<p>ವಿಧಾನಸಭಾ ಕಲಾಪದಲ್ಲಿ ನೆಲಮಂಗಲದ ಎನ್. ಶ್ರೀನಿವಾಸ ಅವರು ಶೇ 100ರಷ್ಟು ಹಾಜರಾತಿ ಹೊಂದಿದ್ದಾರೆ. ಮೂವರು ಶಾಸಕರು ಶೇ 70ಕ್ಕಿಂತ ಕಡಿಮೆ ಹಾಜರಾತಿ ಹೊಂದಿದ್ದಾರೆ. ಶೇ 53.62ರಷ್ಟು ಹಾಜರಾತಿ ಹೊಂದಿರುವ ಪ್ರಿಯಕೃಷ್ಣ ಕೊನೆಯ ಸ್ಥಾನದಲ್ಲಿದ್ದಾರೆ.</p>.<p>ಬಹುತೇಕ ಶಾಸಕರ ಆದಾಯ ಹೆಚ್ಚಳವಾಗಿದೆ. ಕೆ.ಗೋಪಾಲಯ್ಯ (ಶೇ 1,3399) ಮತ್ತು ಮುನಿರತ್ನ (ಶೇ 959) ಆದಾಯ ವಿಪರೀತ ಏರಿಕೆಯಾಗಿದೆ. ಎನ್.ಎ. ಹ್ಯಾರಿಸ್ (ಶೇ 318) ಮತ್ತು ಆರ್.ಅಶೋಕ್ (ಶೇ 104) ಆನಂತರದ ಸ್ಥಾನ ಹೊಂದಿದ್ದಾರೆ.</p>.<p>ಕಾರ್ಯಕ್ರಮದಲ್ಲಿ ರಂಗಕರ್ಮಿ ಪ್ರಕಾಶ್ ಬೆಳವಾಡಿ, ಸಿವಿಕ್ ಬೆಂಗಳೂರು ಸಂಸ್ಥೆಯ ಕಾರ್ಯನಿರ್ವಾಹಕ ಟ್ರಸ್ಟಿ ಕಾತ್ಯಾಯಿನಿ ಚಾಮರಾಜ್, ಸದಸ್ಯ ಎ.ಕೃಷ್ಣ ಪ್ರಶಾಂತ್ ಉಪಸ್ಥಿತರಿದ್ದರು. ನಗರದ ವಿವಿಧ ಸಮಸ್ಯೆಗಳನ್ನು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಬಿಡಿಸಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>