<p><strong>ಬೆಂಗಳೂರು:</strong> ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ₹ 7.30 ಲಕ್ಷ ಹೂಡಿಕೆ ಮಾಡಿಸಿಕೊಂಡು ವಂಚಿಸಲಾಗಿದ್ದು, ಈ ಬಗ್ಗೆ ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ದೇವನಹಳ್ಳಿಯ ಜಾಲ ಹೋಬಳಿಯ ನಿವಾಸಿಯೊಬ್ಬರು ದೂರು ನೀಡಿದ್ದಾರೆ. ಆರೋಪಿಗಳಾದ ಅಹ್ಮದ್ ಶಕೀರ್, ರಹೀಬ್ ಲಾಲ್ ಹಾಗೂ ಇರ್ಷಾದ್ ಮೊಹಮ್ಮದ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಖಾಸಗಿ ಕಂಪನಿಯಲ್ಲಿ ದೂರುದಾರ ಕೆಲಸ ಮಾಡುತ್ತಿದ್ದಾರೆ. ಅಲ್ಫಾ ಎಂಪೈರ್ ಇಂಟರ್ನ್ಯಾಷನಲ್ ಕಂಪನಿ ಪ್ರತಿನಿಧಿ ಸೋಗಿನಲ್ಲಿ ದೂರುದಾರರಿಗೆ ಕರೆ ಮಾಡಿದ್ದ ಆರೋಪಿಗಳು, ‘ನಮ್ಮ ಕಂಪನಿಯಲ್ಲಿ ಹೂಡಿಕೆ ಮಾಡಿದರೆ, ನಿಗದಿತ ಅವಧಿಯೊಳಗೆ ಹಣ ದ್ವಿಗುಣಗೊಳ್ಳುತ್ತದೆ’ ಎಂದಿದ್ದರು. ಅದನ್ನು ನಂಬಿದ್ದ ದೂರುದಾರ, ₹ 1.90 ಲಕ್ಷ ಹೂಡಿಕೆ ಮಾಡಿದ್ದರು.’</p>.<p>‘ಮತ್ತಷ್ಟು ಮಂದಿಯಿಂದ ಹಣ ಹೂಡಿಕೆ ಮಾಡಿಸಿದರೆ ಲಾಭ ನೀಡುವುದಾಗಿ ಆರೋಪಿಗಳು ಹೇಳಿದ್ದರು. ಅದನ್ನೂ ನಂಬಿದ್ದ ದೂರುದಾರ, ಸ್ನೇಹಿತರ ಮೂಲಕ ₹ 5.40 ಲಕ್ಷ ಹೂಡಿಕೆ ಮಾಡಿಸಿದ್ದರು. ನಿಗದಿತ ದಿನದೊಳಗೆ ಕಂಪನಿಯಿಂದ ಯಾವುದೇ ಹಣ ವಾಪಸು ಬಂದಿಲ್ಲ. ಈ ಬಗ್ಗೆ ವಿಚಾರಿಸಿದಾಗ ಕಂಪನಿಯಿಂದ ಪ್ರತಿಕ್ರಿಯೆ ಸಿಕ್ಕಿಲ್ಲ’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ₹ 7.30 ಲಕ್ಷ ಹೂಡಿಕೆ ಮಾಡಿಸಿಕೊಂಡು ವಂಚಿಸಲಾಗಿದ್ದು, ಈ ಬಗ್ಗೆ ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ದೇವನಹಳ್ಳಿಯ ಜಾಲ ಹೋಬಳಿಯ ನಿವಾಸಿಯೊಬ್ಬರು ದೂರು ನೀಡಿದ್ದಾರೆ. ಆರೋಪಿಗಳಾದ ಅಹ್ಮದ್ ಶಕೀರ್, ರಹೀಬ್ ಲಾಲ್ ಹಾಗೂ ಇರ್ಷಾದ್ ಮೊಹಮ್ಮದ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಖಾಸಗಿ ಕಂಪನಿಯಲ್ಲಿ ದೂರುದಾರ ಕೆಲಸ ಮಾಡುತ್ತಿದ್ದಾರೆ. ಅಲ್ಫಾ ಎಂಪೈರ್ ಇಂಟರ್ನ್ಯಾಷನಲ್ ಕಂಪನಿ ಪ್ರತಿನಿಧಿ ಸೋಗಿನಲ್ಲಿ ದೂರುದಾರರಿಗೆ ಕರೆ ಮಾಡಿದ್ದ ಆರೋಪಿಗಳು, ‘ನಮ್ಮ ಕಂಪನಿಯಲ್ಲಿ ಹೂಡಿಕೆ ಮಾಡಿದರೆ, ನಿಗದಿತ ಅವಧಿಯೊಳಗೆ ಹಣ ದ್ವಿಗುಣಗೊಳ್ಳುತ್ತದೆ’ ಎಂದಿದ್ದರು. ಅದನ್ನು ನಂಬಿದ್ದ ದೂರುದಾರ, ₹ 1.90 ಲಕ್ಷ ಹೂಡಿಕೆ ಮಾಡಿದ್ದರು.’</p>.<p>‘ಮತ್ತಷ್ಟು ಮಂದಿಯಿಂದ ಹಣ ಹೂಡಿಕೆ ಮಾಡಿಸಿದರೆ ಲಾಭ ನೀಡುವುದಾಗಿ ಆರೋಪಿಗಳು ಹೇಳಿದ್ದರು. ಅದನ್ನೂ ನಂಬಿದ್ದ ದೂರುದಾರ, ಸ್ನೇಹಿತರ ಮೂಲಕ ₹ 5.40 ಲಕ್ಷ ಹೂಡಿಕೆ ಮಾಡಿಸಿದ್ದರು. ನಿಗದಿತ ದಿನದೊಳಗೆ ಕಂಪನಿಯಿಂದ ಯಾವುದೇ ಹಣ ವಾಪಸು ಬಂದಿಲ್ಲ. ಈ ಬಗ್ಗೆ ವಿಚಾರಿಸಿದಾಗ ಕಂಪನಿಯಿಂದ ಪ್ರತಿಕ್ರಿಯೆ ಸಿಕ್ಕಿಲ್ಲ’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>