ಕೆನರಾ ಬ್ಯಾಂಕ್ ಕಲ್ಕರೆ ಶಾಖೆಯ ಅಂದಿನ ವ್ಯವಸ್ಥಾಪಕರು ಮತ್ತು ಇತರೆ ಸಿಬ್ಬಂದಿಯೊಂದಿಗೆ ಶಾಮೀಲಾಗಿ ಮಧ್ಯವರ್ತಿಗಳಾದ ಗೋವಿಂದ ರಾಜು, ಸೈಯದ್ ಸಾದಿಕ್, ಜಿಮರನ್ ಪಾಷಾ, ಅಮರ್, ಸತ್ಯನಾರಾಯಣ, ಜೆ. ಶ್ರೀಧರ, ಕೆ. ಮಂಜುನಾಥ್, ಭುವನೇಶ್, ಕೋದಂಡರಾಮ ಮತ್ತು ಜೀವರಾಜ್ ಅವರು ಹಣ ದುರುಪಯೋಗ ಮಾಡಿಕೊಂಡಿದ್ದಾರೆ. ಮಾಗಡಿ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಲಾಗಿದೆ ಎಂದು ನಿಗಮದ ಬೆಂಗಳೂರು ನಗರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.