ಡಿಕೆಶಿ ಜಾಮೀನಿಗೆ ವಿರೋಧ: ‘ಸುಪ್ರೀಂ’ ವಿಚಾರಣೆ ಇಂದು

ನವದೆಹಲಿ: ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್ ಅವರಿಗೆ ಜಾಮೀನು ಮಂಜೂರು ಮಾಡಿರುವ ದೆಹಲಿ ಹೈಕೋರ್ಟ್ನ ಆದೇಶದ ಸಿಂಧುತ್ವ ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ಶುಕ್ರವಾರ ನಡೆಯಲಿದೆ.
ಆರೋಪಿ ಶಿವಕುಮಾರ್ ಈ ಮೇಲ್ಮನವಿಯನ್ನು ವಿರೋಧಿಸಿ ಕೇವಿಯಟ್ ಸಲ್ಲಿಸಿದ್ದು, ನ್ಯಾಯಮೂರ್ತಿ ಆರ್.ಎಫ್. ನರಿಮನ್ ನೇತೃತ್ವದ ದ್ವಿಸದಸ್ಯ ಪೀಠವು ಪ್ರಕರಣದ ವಿಚಾರಣೆಯನ್ನು ನಡೆಸಲಿದೆ.
ಕಳೆದ ಸೆಪ್ಟೆಂಬರ್ 3ರಂದು ಬಂಧನಕ್ಕೆ ಒಳಗಾಗಿದ್ದ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಈಚೆಗೆ ಜಾಮೀನು ಮಂಜೂರು ಮಾಡಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.