ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರಕಾಸ್ತ್ರ ತೋರಿಸಿ ₹6 ಲಕ್ಷ ನಗದು ಕಳ್ಳತನ

Last Updated 22 ಡಿಸೆಂಬರ್ 2021, 20:15 IST
ಅಕ್ಷರ ಗಾತ್ರ

ಬೆಂಗಳೂರು: ಐವರು ದುಷ್ಕರ್ಮಿಗಳು ಏಜೆನ್ಸಿಯ ಗೋದಾಮಿಗೆ ನುಗ್ಗಿ ಅಲ್ಲಿದ್ದ ನೌಕರರಿಗೆ ಮಾರಕಾಸ್ತ್ರ ತೋರಿಸಿ ಹೆದರಿಸಿದ ಕಳ್ಳರು ₹ 6 ಲಕ್ಷ ನಗದು ಕದ್ದು ಪರಾರಿಯಾಗಿದ್ದಾರೆ. ಈ ಸಂಬಂಧ ಅನ್ನಪೂರ್ಣೇಶ್ವರಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳುಸೋಮವಾರ ರಾತ್ರಿ 8.30ರ ಸುಮಾರಿಗೆನಾಗರಬಾವಿಯ 9ನೇ ಹಂತದಲ್ಲಿರುವ ಸುಧಾ ಏಜೆನ್ಸಿಯ ಗೋದಾಮಿಗೆ ನುಗ್ಗಿದ್ದರು. ಅಲ್ಲಿದ್ದ ಕೆಲಸಗಾರರನ್ನು ಹೆದರಿಸಿ, ಗಲ್ಲಾಪೆಟ್ಟಿಗೆಯಲ್ಲಿದ್ದ ₹6 ಲಕ್ಷ ನಗದು ಎತ್ತಿಕೊಂಡು ಪರಾರಿಯಾಗಿದ್ದರು. ಸುತ್ತಲಿನ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಿದ್ದೇವೆ’ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT