<p><strong>ಬೆಂಗಳೂರು:</strong> ವಸತಿ ಪ್ರದೇಶಗಳಲ್ಲಿ ಮಂಗಗಳು ಸೃಷ್ಟಿಸುವ ಸಮಸ್ಯೆ ನಿಭಾಯಿಸುವ ಸಂಬಂಧ ಯೋಜನೆ ರೂಪಿಸಲು ಅರಣ್ಯ ಇಲಾಖೆ ಮತ್ತು ಬಿಬಿಎಂಪಿ ಹಿರಿಯ ಅಧಿಕಾರಿಗಳ ಸಭೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ವಕೀಲ ಬಿ.ಎಸ್. ರಾಧಾನಂದನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಮಂಗಗಳ ಉಪಟಳದಿಂದ ಜನರನ್ನು ಕಾಪಾಡುವುದು ಮತ್ತು ಮಂಗಳ ಜೀವ ರಕ್ಷಿಸುವುದು ಎರಡೂ ಸರ್ಕಾರದ ಜವಾಬ್ದಾರಿ’ ಎಂದು ಹೇಳಿತು.</p>.<p>‘ಕೋತಿಗಳ ಉಪಟಳದ ಬಗ್ಗೆ ದೂರು ಸ್ವೀಕರಿಸಲು ವ್ಯವಸ್ಥೆಯೊಂದನ್ನು ರೂಪಿಸಲು ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ಮನವಿ ಮಾಡಿದರು.</p>.<p><strong>ಸ್ವಾರಸ್ಯ ಓದು:<a href="https://www.prajavani.net/artculture/article-features/uluvatu-monkeys-742223.html" target="_blank"> </a></strong><a href="https://www.prajavani.net/artculture/article-features/uluvatu-monkeys-742223.html" target="_blank">‘ವ್ಯವಹಾರ ಚತುರ’ ಉಲುವಾಟು ಮಂಗಗಳು</a></p>.<p>‘ದೆಹಲಿ ಹೈಕೋರ್ಟ್ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ ಸಮಸ್ಯೆ ನಿಭಾಯಿಸುವ ಯೋಜನೆ ರೂಪಿಸಬಹುದಾಗಿದೆ. ಮಂಗಗಳನ್ನು ಸುರಕ್ಷಿತವಾಗಿ ಹಿಡಿದು ನೈಸರ್ಗಿಕ ಆವಾಸಸ್ಥಾನಕ್ಕೆ ಸ್ಥಳಾಂತರಿಸಬೇಕಾಗುತ್ತದೆ. ಈ ಸಂಬಂಧ ಜು.12ರೊಳಗೆ ಅನುಸರಣೆ ವರದಿ ಸಲ್ಲಿಸಬೇಕು’ ಎಂದು ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಸತಿ ಪ್ರದೇಶಗಳಲ್ಲಿ ಮಂಗಗಳು ಸೃಷ್ಟಿಸುವ ಸಮಸ್ಯೆ ನಿಭಾಯಿಸುವ ಸಂಬಂಧ ಯೋಜನೆ ರೂಪಿಸಲು ಅರಣ್ಯ ಇಲಾಖೆ ಮತ್ತು ಬಿಬಿಎಂಪಿ ಹಿರಿಯ ಅಧಿಕಾರಿಗಳ ಸಭೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ವಕೀಲ ಬಿ.ಎಸ್. ರಾಧಾನಂದನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಮಂಗಗಳ ಉಪಟಳದಿಂದ ಜನರನ್ನು ಕಾಪಾಡುವುದು ಮತ್ತು ಮಂಗಳ ಜೀವ ರಕ್ಷಿಸುವುದು ಎರಡೂ ಸರ್ಕಾರದ ಜವಾಬ್ದಾರಿ’ ಎಂದು ಹೇಳಿತು.</p>.<p>‘ಕೋತಿಗಳ ಉಪಟಳದ ಬಗ್ಗೆ ದೂರು ಸ್ವೀಕರಿಸಲು ವ್ಯವಸ್ಥೆಯೊಂದನ್ನು ರೂಪಿಸಲು ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ಮನವಿ ಮಾಡಿದರು.</p>.<p><strong>ಸ್ವಾರಸ್ಯ ಓದು:<a href="https://www.prajavani.net/artculture/article-features/uluvatu-monkeys-742223.html" target="_blank"> </a></strong><a href="https://www.prajavani.net/artculture/article-features/uluvatu-monkeys-742223.html" target="_blank">‘ವ್ಯವಹಾರ ಚತುರ’ ಉಲುವಾಟು ಮಂಗಗಳು</a></p>.<p>‘ದೆಹಲಿ ಹೈಕೋರ್ಟ್ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ ಸಮಸ್ಯೆ ನಿಭಾಯಿಸುವ ಯೋಜನೆ ರೂಪಿಸಬಹುದಾಗಿದೆ. ಮಂಗಗಳನ್ನು ಸುರಕ್ಷಿತವಾಗಿ ಹಿಡಿದು ನೈಸರ್ಗಿಕ ಆವಾಸಸ್ಥಾನಕ್ಕೆ ಸ್ಥಳಾಂತರಿಸಬೇಕಾಗುತ್ತದೆ. ಈ ಸಂಬಂಧ ಜು.12ರೊಳಗೆ ಅನುಸರಣೆ ವರದಿ ಸಲ್ಲಿಸಬೇಕು’ ಎಂದು ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>