<p><strong>ಬೆಂಗಳೂರು</strong>: ನಗರದ ಲಾಲ್ಬಾಗ್ ಆವರಣದಲ್ಲಿ ಇಪಿಎಸ್-95 ಪಿಂಚಣಿದಾರರ ಮಾಸಿಕ ಸಭೆ ನಡೆಯಿತು.</p>.<p>ಸಂಘದ ಅಧ್ಯಕ್ಷ ಶಂಕರ್ ಕುಮಾರ್ ಮಾತನಾಡಿ, ರಾಷ್ಟ್ರೀಯ ಸಂಘರ್ಷ ಸಮಿತಿ ಅಧ್ಯಕ್ಷರ ಹೋರಾಟಕ್ಕೆ ನಮ್ಮ ಸಂಘಟನೆ ಕೈಜೋಡಿಸಲಿದೆ. ಅವರ ಹೋರಾಟಕ್ಕೆ ಇನ್ನೂ ಹೆಚ್ಚಿನ ಬಲ ಬರಲಿದೆ. ಕನಿಷ್ಠ ಪಿಂಚಣಿ ₹ 7,500, ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯಕ್ಕೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ಸಾಧ್ಯವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>ಕಾರ್ಯಾಧ್ಯಕ್ಷ ನಂಜುಂಡೇಗೌಡ ಮಾತನಾಡಿ, ‘ಅಧಿಕಾರಿಗಳು ವರ್ತನೆ ಅಮಾನವೀಯ ಹಾಗೂ ಕಾರ್ಮಿಕ ವಿರೋಧಿ ನೀತಿಯಿಂದ ಕೂಡಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಅದರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>‘ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ವ್ಯತಿರಿಕ್ತವಾಗಿ, ಎಲ್ಲ ಬೆಳವಣಿಗೆಗಳು ನಡೆಯುತ್ತಿವೆ. ಆರ್.ಸಿ. ಗುಪ್ತ ದಾಖಲಿಸಿರುವ ನ್ಯಾಯಾಲಯ ನಿಂದನಾ ಅರ್ಜಿ, ಪುನರ್ ಪರಿಶೀಲಿನಾ ಅರ್ಜಿಗಳು ವಿಚಾರಣೆಗೆ ಬಂದಾಗ ಅಧಿಕಾರಿಗಳ ನಿಜ ಬಣ್ಣ ತಿಳಿಯಲಿದೆ’ ಎಂದರು.</p>.<p>ಸಂಘದ ಉಪಾಧ್ಯಕ್ಷ ಆರ್ ಸುಬ್ಬಣ್ಣ, ಸಂಘದ ಪ್ರಧಾನ ಕಾರ್ಯದರ್ಶಿ ಡೋಲಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಲಾಲ್ಬಾಗ್ ಆವರಣದಲ್ಲಿ ಇಪಿಎಸ್-95 ಪಿಂಚಣಿದಾರರ ಮಾಸಿಕ ಸಭೆ ನಡೆಯಿತು.</p>.<p>ಸಂಘದ ಅಧ್ಯಕ್ಷ ಶಂಕರ್ ಕುಮಾರ್ ಮಾತನಾಡಿ, ರಾಷ್ಟ್ರೀಯ ಸಂಘರ್ಷ ಸಮಿತಿ ಅಧ್ಯಕ್ಷರ ಹೋರಾಟಕ್ಕೆ ನಮ್ಮ ಸಂಘಟನೆ ಕೈಜೋಡಿಸಲಿದೆ. ಅವರ ಹೋರಾಟಕ್ಕೆ ಇನ್ನೂ ಹೆಚ್ಚಿನ ಬಲ ಬರಲಿದೆ. ಕನಿಷ್ಠ ಪಿಂಚಣಿ ₹ 7,500, ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯಕ್ಕೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ಸಾಧ್ಯವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>ಕಾರ್ಯಾಧ್ಯಕ್ಷ ನಂಜುಂಡೇಗೌಡ ಮಾತನಾಡಿ, ‘ಅಧಿಕಾರಿಗಳು ವರ್ತನೆ ಅಮಾನವೀಯ ಹಾಗೂ ಕಾರ್ಮಿಕ ವಿರೋಧಿ ನೀತಿಯಿಂದ ಕೂಡಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಅದರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>‘ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ವ್ಯತಿರಿಕ್ತವಾಗಿ, ಎಲ್ಲ ಬೆಳವಣಿಗೆಗಳು ನಡೆಯುತ್ತಿವೆ. ಆರ್.ಸಿ. ಗುಪ್ತ ದಾಖಲಿಸಿರುವ ನ್ಯಾಯಾಲಯ ನಿಂದನಾ ಅರ್ಜಿ, ಪುನರ್ ಪರಿಶೀಲಿನಾ ಅರ್ಜಿಗಳು ವಿಚಾರಣೆಗೆ ಬಂದಾಗ ಅಧಿಕಾರಿಗಳ ನಿಜ ಬಣ್ಣ ತಿಳಿಯಲಿದೆ’ ಎಂದರು.</p>.<p>ಸಂಘದ ಉಪಾಧ್ಯಕ್ಷ ಆರ್ ಸುಬ್ಬಣ್ಣ, ಸಂಘದ ಪ್ರಧಾನ ಕಾರ್ಯದರ್ಶಿ ಡೋಲಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>