<p><strong>ಬೆಂಗಳೂರು</strong>: ಲಾಲ್ಬಾಗ್ ಆವರಣದಲ್ಲಿ ಭಾನುವಾರ ‘ಇಪಿಎಸ್-95’ ಪಿಂಚಣಿದಾರರ ಮಾಸಿಕ ಸಭೆ ನಡೆಯಿತು. </p>.<p>ಬಿಎಂಟಿಸಿ ಮತ್ತು ಕೆಎಸ್ಆರ್ಟಿಎಸ್ ನಿವೃತ್ತ ನೌಕರರ ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ ಮಾತನಾಡಿ, ‘ಇಪಿಎಫ್ಓ ಅಧಿಕಾರಿಗಳು ಸುಪ್ರಿಂ ಕೋರ್ಟ್ ತೀರ್ಪನ್ನು ಅನುಷ್ಠಾನಗೊಳಿಸದೇ, ಹತ್ತಾರು ಸುತ್ತೋಲೆಗಳನ್ನು ಹೊರಡಿಸುವ ಮೂಲಕ ತಮ್ಮ ನ್ಯೂನತೆಗಳನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ನಿವೃತ್ತರ ಬದುಕಿಗೆ ಕನಿಷ್ಠ ಪಿಂಚಣಿ ಸೌಲಭ್ಯ ಸಿಗಬೇಕೆಂದು ದೇಶದಾದ್ಯಂತ ಹೋರಾಟ ನಡೆಸುತ್ತಿರುವ ರಾಷ್ಟ್ರೀಯ ಸಂಘರ್ಷ ಸಮಿತಿಯ ಅಧ್ಯಕ್ಷ ಅಶೋಕ್ ರಾಹುತ್ ಅವರೊಂದಿಗೆ ನಮ್ಮ ಸಂಘಟನೆ ಕೈ ಜೋಡಿಸಿದೆ’ ಎಂದರು.</p>.<p>ಸಂಘದ ಉಪಾಧ್ಯಕ್ಷ ಆರ್. ಸುಬ್ಬಣ್ಣ ಮಾತನಾಡಿ, ‘ಇಪಿಎಫ್ಓ ಅಧಿಕಾರಿಗಳು ಎರಡನೇ ಬಾರಿಗೆ ಆನ್ಲೈನ್ ಅರ್ಜಿ ಸಲ್ಲಿಸಲು ಕಾಲಾವಕಾಶ ವಿಸ್ತರಿಸಿದ್ದು, ಅರ್ಜಿ ಸಲ್ಲಿಸದೇ ಇರುವ ನಿವೃತ್ತರೆಲ್ಲರೂ ಅರ್ಜಿ ಸಲ್ಲಿಸಬೇಕು. ಈ ಹಿಂದೆ ತಪ್ಪಾಗಿ ಅರ್ಜಿ ಸಲ್ಲಿಸಿದ್ದರೂ ಅದನ್ನು ಸರಿಪಡಿಸಲು ಅವಕಾಶವಿದೆ. ಪಿಂಚಣಿ ವಿಷಯದಲ್ಲಿ ತಾರ್ಕಿಕ ಅಂತ್ಯ ಕಾಣುವವರೆಗೂ ಹೋರಾಟ ಮುಂದುವರೆಯಲಿದೆ’ ಎಂದು ಹೇಳಿದರು.</p>.<p>ಆರ್ ನಾಗರಾಜು, ರುಕ್ಮಿಶ್, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಲಾಲ್ಬಾಗ್ ಆವರಣದಲ್ಲಿ ಭಾನುವಾರ ‘ಇಪಿಎಸ್-95’ ಪಿಂಚಣಿದಾರರ ಮಾಸಿಕ ಸಭೆ ನಡೆಯಿತು. </p>.<p>ಬಿಎಂಟಿಸಿ ಮತ್ತು ಕೆಎಸ್ಆರ್ಟಿಎಸ್ ನಿವೃತ್ತ ನೌಕರರ ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ ಮಾತನಾಡಿ, ‘ಇಪಿಎಫ್ಓ ಅಧಿಕಾರಿಗಳು ಸುಪ್ರಿಂ ಕೋರ್ಟ್ ತೀರ್ಪನ್ನು ಅನುಷ್ಠಾನಗೊಳಿಸದೇ, ಹತ್ತಾರು ಸುತ್ತೋಲೆಗಳನ್ನು ಹೊರಡಿಸುವ ಮೂಲಕ ತಮ್ಮ ನ್ಯೂನತೆಗಳನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ನಿವೃತ್ತರ ಬದುಕಿಗೆ ಕನಿಷ್ಠ ಪಿಂಚಣಿ ಸೌಲಭ್ಯ ಸಿಗಬೇಕೆಂದು ದೇಶದಾದ್ಯಂತ ಹೋರಾಟ ನಡೆಸುತ್ತಿರುವ ರಾಷ್ಟ್ರೀಯ ಸಂಘರ್ಷ ಸಮಿತಿಯ ಅಧ್ಯಕ್ಷ ಅಶೋಕ್ ರಾಹುತ್ ಅವರೊಂದಿಗೆ ನಮ್ಮ ಸಂಘಟನೆ ಕೈ ಜೋಡಿಸಿದೆ’ ಎಂದರು.</p>.<p>ಸಂಘದ ಉಪಾಧ್ಯಕ್ಷ ಆರ್. ಸುಬ್ಬಣ್ಣ ಮಾತನಾಡಿ, ‘ಇಪಿಎಫ್ಓ ಅಧಿಕಾರಿಗಳು ಎರಡನೇ ಬಾರಿಗೆ ಆನ್ಲೈನ್ ಅರ್ಜಿ ಸಲ್ಲಿಸಲು ಕಾಲಾವಕಾಶ ವಿಸ್ತರಿಸಿದ್ದು, ಅರ್ಜಿ ಸಲ್ಲಿಸದೇ ಇರುವ ನಿವೃತ್ತರೆಲ್ಲರೂ ಅರ್ಜಿ ಸಲ್ಲಿಸಬೇಕು. ಈ ಹಿಂದೆ ತಪ್ಪಾಗಿ ಅರ್ಜಿ ಸಲ್ಲಿಸಿದ್ದರೂ ಅದನ್ನು ಸರಿಪಡಿಸಲು ಅವಕಾಶವಿದೆ. ಪಿಂಚಣಿ ವಿಷಯದಲ್ಲಿ ತಾರ್ಕಿಕ ಅಂತ್ಯ ಕಾಣುವವರೆಗೂ ಹೋರಾಟ ಮುಂದುವರೆಯಲಿದೆ’ ಎಂದು ಹೇಳಿದರು.</p>.<p>ಆರ್ ನಾಗರಾಜು, ರುಕ್ಮಿಶ್, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>